23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ವಿಕಲಚೇತನರ ದಿನದ ಆಚರಣೆ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5 ರಲ್ಲಿ ಕಾಯ್ದಿರಿಸಿದ ಮೊತ್ತದಲ್ಲಿ 90 ಮಂದಿ ಫಲಾನುಭವಿಗಳಿಗೆ ತಲಾ 7 ಸಾವಿರ ರೂ.ಗಳಂತೆ 6.30 ಲಕ್ಷ‌ ರೂ. ಪ್ರೋತ್ಸಾಹ ನಿಧಿ ಹಸ್ತಾಂತರಿಸಲಾಯಿತು.

ಫೆ.4 ರಂದು ಇಲ್ಲಿನ‌‌ ನೇತ್ರಾವತಿ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷೆ ವಿಮಲಾ ಅವರ ಅಧ್ಯಕ್ಷತೆಯಲ್ಲಿ‌ ಸಭೆ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ವಿಕಲಚೇತನರ ತಾಲೂಕು ಸಮನ್ವಯಾಧಿಕಾರಿ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜಾ ಇಲಾಖಾ‌ ಮಾಹಿತಿ‌ ನೀಡಿದರು.


ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕ ಅಶ್ರಫ್ ಆಲಿಕುಂಞಿ ಮುಂಡಾಜೆ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ‌ ನೀಡಿದರು.


ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಸದಸ್ಯರಾದ ಮುರಳಿ ಮತ್ತು ಸುನೀತಾ ಉಪಸ್ಥಿತರಿದ್ದರು.
ಅಭಿವೃದ್ಧಿ ಅಧಿಕಾರಿ ಗಾಯತ್ರಿ ದಿನೇಶ್ ಗೌಡ ಸ್ವಾಗತಿಸಿ ಪ್ರಸ್ತಾವನೆಗೈದರು. ‌ಗ್ರಾಮೀಣ‌ ಪುನರ್ವಸತಿ ಕಾರ್ಯಕರ್ತ ಹರೀಶ್ ವರದಿ ಮಂಡಿಸಿದರು.
ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ಕಾರ್ಯಕ್ರಮ‌‌ ನಿರೂಪಿಸಿದರು.‌ ಕಾರ್ಯದರ್ಶಿ ಗಾಯತ್ರಿ ವಂದಿಸಿದರು.

Related posts

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya
error: Content is protected !!