23.7 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿವರದಿ

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

ಬೆಳ್ತಂಗಡಿ: ದೇಶದಲ್ಲಿ ಶೋಷಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರ ಹೋರಾಟ ನಡೆಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷವು ಫೆ.10 ರಿಂದ ಮಾರ್ಚ್ 10 ರವರೆಗೆ ಎಸ್‌ಡಿಪಿಐ ಸೇರೋಣ ಜನ ಸಾಮಾನ್ಯರ ಧ್ವನಿಗೆ ಶಕ್ತಿ ನೀಡೋಣ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2009ರಲ್ಲಿ ಪಕ್ಷ ಸ್ಥಾಪನೆಯಾದ ದಿನದಿಂದಲೂ ಎಸ್‌ಡಿಪಿಐ ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡದೆ, ಜನರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ,ಫ್ಯಾಶಿಸಂ ವಿರುದ್ಧವಾಗಿ ರಾಜಿಯಿಲ್ಲದ ಹೋರಾಟ ನಡೆಸುತ್ತಾ ಬಂದಿದೆ. ಹಸಿವು ಮುಕ್ತ ಮತ್ತು ಭಯ ಮುಕ್ತ ಸಮಾಜದ ನಿರ್ಮಾಣವೇ ಪಕ್ಷದ ಮುಖ್ಯ ಗುರಿಯಾಗಿದ್ದು, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಜನಸಾಮಾನ್ಯರನ್ನು ಸಂಘಟಿಸುವಲ್ಲಿ ಪಕ್ಷವು ಮುಂಚೂಣಿಯಲ್ಲಿದೆ.

ಸಂವಿಧಾನ ಪ್ರೇಮಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿರುವ ನವಾಝ್ ಕಟ್ಟೆ ಅವರು, “ವ್ಯವಸ್ಥೆಯ ಬದಲಾವಣೆಗಾಗಿ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಇಂದಿನ ಕಾಲಘಟ್ಟದಲ್ಲಿ ಸಂಘಟಿತ ಶಕ್ತಿ ಅನಿವಾರ್ಯವಾಗಿದೆ. ಆದ್ದರಿಂದ ಸಂವಿಧಾನ ಪ್ರಿಯ ನಾಗರಿಕರು, ವಿಶೇಷವಾಗಿ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಡಿಪಿಐ ಸದಸ್ಯತ್ವ ಪಡೆಯುವ ಮೂಲಕ ಜನಪರ ಹೋರಾಟಕ್ಕೆ ಬಲ ತುಂಬಬೇಕು” ಎಂದು ಕೋರಿದ್ದಾರೆ.ಫೆಬ್ರವರಿ 10 ರಂದು ಜಿಲ್ಲೆಯಾಧ್ಯಂತ ಆರಂಭಗೊಳ್ಳಲಿರುವ ಸದಸ್ಯತ್ವ ಅಭಿಯಾನದಲ್ಲಿ ನಮ್ಮ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಹೊಸ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya
error: Content is protected !!