September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನೀಡಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಫೆ.5ರಂದು ವಿಚಾರಣೆ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಲಾಗಿದೆ.

ಪ್ರಕರಣದಲ್ಲಿ ಎಸ್‌ಐಟಿ ವರದಿ ಸಲ್ಲಿಕೆಯಾದ ಬೆನ್ನಲ್ಲಿಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ನ್ಯಾಯವಾದಿಗಳು ಅರ್ಜಿ ಸಲ್ಲಿಸಿ ಪ್ರಕರಣದಲ್ಲಿ ಧರ್ಮಸ್ಥಳದವರು ಸಂತ್ರಸ್ಥರಾಗಿದ್ದು, ತಮಗೂ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು. ಇದೇ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಾದ ವಿವಾದ ನಡೆಯಿತು. ಧರ್ಮಸ್ಥಳ ಪರವಾಗಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್ ಅವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರು. ಎಸ್‌ಐಟಿ ಪರ ವಕೀಲರು ಧರ್ಮಸ್ಥಳವನ್ನು ಪ್ರಕರಣದಲ್ಲಿ ಭಾಗಿಯಾಗಲು ಅವಕಾಶ ಕೇಳಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಿರುವುದಾಗಿ ತಿಳಿದು ಬಂದಿದೆ.

ಫೆ.13ಕ್ಕೆ ವಿಚಾರಣೆ: ಈಗಾಗಲೇ ಮಹೇಶ್ ಶೆಟ್ಟಿ ಹಾಗೂ ಇತರರ ಪರವಾಗಿ ಹಾಜರಾಗುತ್ತಿರುವ ನ್ಯಾಯವಾದಿಗಳು ಧರ್ಮಸ್ಥಳದವರನ್ನು ಈ ಪ್ರಕರಣದಲ್ಲಿ ಕಕ್ಷಿದಾರರಾಗಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಫೆ.13 ಕ್ಕೆ ಮುಂದೂಡಿದ್ದು, ಅಂದು ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ವಾದ ಮಂಡಿಸಲಿದ್ದಾರೆ. ಎಸ್ಐಟಿ ಪರ ವಕೀಲರೂ ಆಕ್ಷೇಪಣೆ ಹಾಕಿರುವ ಹಿನ್ನೆಲೆಯಲ್ಲಿ ಅವರೂ ಈ ಬಗ್ಗೆ ವಾದ ಮಂಡಿಸಲಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ: ಸಾಕ್ಷಿ ದೂರುದಾರನಾಗಿ ಬಂದು ಜೈಲು ಸೇರಿ ಇದೀಗ ಜಾಮೀನಿನ ಮೇಲೆ ಹೊರ ಬಂದಿರುವ ಚಿನ್ನಯ್ಯ ಹಾಗೂ ಆತನ ಪತ್ನಿ ಫೆ.5ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರನ್ನು ಪ್ರಕರಣದಲ್ಲಿ ಭಾಗಿಗಳಾಗಲು ಅವಕಾಶ ನೀಡುವುದಕ್ಕೆ ತಮ್ಮ ಆಕ್ಷೇಪಣೆ ಇಲ್ಲ ಎಂದು ನ್ಯಾಯಾಲಯದ ಮುಂದೆ ಚಿನ್ನಯ್ಯನ ಪರ ವಕೀಲರು ತಿಳಿಸಿರುವುದಾಗಿ ತಿಳಿದು ಬಂದಿದೆ.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!