25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಗಣಪತಿ ದೇವರ ಪ್ರತಿಷ್ಠಾ ದಿನದ ಸಲುವಾಗಿ ವಾರ್ಷಿಕ ವರ್ಧಂತಿ ಉತ್ಸವವು (ವಾರ್ಷಿಕ ಜಾತ್ರೆ) ಕ್ಷೇತ್ರದ ತಂತ್ರಿವರ್ಯರಾದ ಪೊಳಲಿ ಕೋಡಿಮಜಲು ಶ್ರೀ ಅನಂತ ಪದ್ಮನಾಭ ಉಪಧ್ಯಾಯರ ನೇತೃತ್ವದಲ್ಲಿ ಫೆ.7ರಂದು ನಡೆಯಿತು,

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಪ್ರಧಾನ ಹವನ, ಸ್ಥಳೀಯರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಶಶಿಧರ ಡೋಂಗ್ರೆ ಸೇನರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ ನಮನ, ಪ್ರಧಾನ ಅರ್ಚಕರಾದ ಎ.ಸೋಮನಾಥ ಮಯ್ಯ, ಪ್ರವೀಣ ಮಯ್ಯ, ಸದಸ್ಯರಾದ ದೀಪಕ್ ಎಚ್.ಡಿ. ಬಳಂಜ, ಸದಾನಂದ ತೋಟದಪಲ್ಕೆ, ಜಿನ್ನಪ್ಪ ಶೆಟ್ಟಿ ಕೆದ್ದು, ಸತೀಶ್ ದೇವಾಡಿಗ ಸಾರಬೈಲು, ಶ್ರೀಮತಿ ಲಾವಣ್ಯ ದೇವಿಪ್ರಸಾದ್ ಶೆಟ್ಟಿ ಬಡಗಕಾರಂದೂರು ಶ್ರೀಮತಿ ಸುಮಲತ ನೀರಲ್ಕೆ ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಮತ್ತು ನಾಲ್ಕೂರು ಪಂಚಶ್ರೀ ಕುಣಿತ ಭಜನಾ ಮಂಡಳಿಯವರಿಂದ ನೃತ್ಯ ಭಜನೆ, ಶ್ರೀರಂಗಪೂಜೆ, ರಾತ್ರಿ ಶ್ರೀ ದೇವರ ಉತ್ಸವ, ಉಪಾಹಾರ, ಸಾಂಸ್ಕೃತಿಕ ಕಾರ್ಯಕ್ರಮ, ಕದಂಬ ನಾಟಕ ತಂಡದಿಂದ ರಂಗಭೂಷಣ ಮಣಿ ಕೋಟೆಬಾಗಿಲು ಕಥೆ ಸಂಭಾಷಣೆ ನಿರ್ದೇಶನ ಸಾರಥ್ಯದ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ತುಳು ಹಾಸ್ಯ ನಾಟಕ “ಓಂಕಾರ” ಪ್ರದರ್ಶನಗೊಳ್ಳಲಿದೆ.

Related posts

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya
error: Content is protected !!