23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

ಮಲವಂತಿಗೆ ಗ್ರಾ.ಪಂ ನಲ್ಲಿ ಸತತ 7 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಇಂದಬೆಟ್ಟು ಗ್ರಾ.ಪಂ. ಗೆ ವರ್ಗಾವಣೆಗೊಂಡ ರಶ್ಮಿ ಬಿ.ಪಿ ಅವರನ್ನು ಫೆ. 5ರಂದು ಪಂಚಾಯತ್ ಸಭಾಂಗಣದಲ್ಲಿ ಬಿಳ್ಕೋಡಲಾಯಿತು.

ಇದೇ ಸಂದರ್ಭದಲ್ಲಿ ಕಳೆದ 5ವರ್ಷಗಳ ಅವಧಿಯಲ್ಲಿ ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಗೌರವಿಸಲಾಯಿತು.

ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ 7ವರ್ಷ ಪಿಡಿಒ ರವರು ಪಂಚಾಯತ್ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದ ಅವರು ಕಳೆದ 5 ವರ್ಷ ಆಡಳಿತ ಅವಧಿಯಲ್ಲಿ ಸಹಕಾರ ನೀಡಿದ ಆಡಳಿತ ಮಂಡಳಿಗೆ, ಅಧಿಕಾರಿಗಳಿಗೆ, ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೂತನ ಪಿಡಿಒ ಮೋಹನ್ ಬಂಗೇರ ಕೆ. ವಿಎ ಸಂತೋಷ್, ಸದಸ್ಯರು, ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಹಾಗೂ ಕೃಷಿ ಸಖಯರು ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿ ಅಕ್ಷತಾ ಪ್ರಾರ್ಥಿಸಿ, ಶ್ರೀಮತಿ ಕಾಂತಿ ದಿನೇಶ್ ಸ್ವಾಗತಿಸಿ, ಪಿಡಿಒ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸದಾಶಿವ ಎ ಧನ್ಯವಾದವಿತ್ತರು.

Related posts

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
error: Content is protected !!