22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

ಬೆಳ್ತಂಗಡಿ: ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ 2ನೇ ಬ್ಯಾಚ್ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆ.7ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎನ್.ಇ.ಟಿ ಸಂಸ್ಥೆಗಳ ಸಮೂಹ ಅಧ್ಯಕ್ಷ ಸಜಿ ಪಿಆರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಶ್ರೀಮತಿ ಶೆರ್ಲಿ, ಐ-ಚೆಸ್ ಎಜು ಪ್ರೈ. ಲಿಮಿಟೆಡ್. ನಿರ್ದೇಶಕ ಜಿಮ್ಮಿ ಥಾಮಸ್ ಉಪಸ್ಥಿತರಿದ್ದರು.

ನಂತರ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜೆರಿಲ್ ಜಾನ್ಸನ್, ಪ್ರಾಂಶುಪಾಲರು ಪ್ರೊ. ಮನು ಕೆ ಜೋಸೆಫ್, ಆಡಳಿತಗಾರರು ಶ್ರೀಮತಿ ಲುಲು ಮರಿಯಾ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಶ್ರೀಹರಿ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ. ವಿದ್ಯಾ ಗೌರಿ ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya
error: Content is protected !!