22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ19 ರಂದು ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣದಲ್ಲಿ ತನಿಖೆ ಮುಂದುವರಿಸಲಾಗಿ, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ಬಂಧಿಸಲಾಗಿದೆ ಹಾಗೂ ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ನೇತೃತ್ವದಲ್ಲಿ, ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದ್ದು, ಈ ವೇಳೆ ಆತನಿಂದ ರೂ 80,೦00/- ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿರುತ್ತದೆ.

ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ರವರು ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ರವರುಗಳನ್ನು ಒಳಗೊಂಡ ತಂಡ ಭಾಗಿಯಾಗಿರುತ್ತಾರೆ.

Related posts

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya
error: Content is protected !!