22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಗ್ರಾಮಪಂಚಾಯತ್ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣಗೊಂಡಿದ್ದ ಹಿಂದೂ ರುದ್ರಭೂಮಿಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ರವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮನುಷ್ಯನ ಅಂತ್ಯದ ಸಮಯದಲ್ಲಿ ಅದರಲ್ಲೂ ಮಳೆಗಾಲದ ಸಮಯದಲ್ಲಿ ಅಂತ್ಯಕ್ರಿಯೆ ಮಾಡಲು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಮುಕ್ತಿದಾಮ ನಿರ್ಮಾಣ ಆಗುತ್ತಿರುವುದು ಸಾರ್ವಜನಿಕರಿಗೆ ಬಹಳಷ್ಟು ಸಹಕಾರಿಯಾಗಿದೆ. ಮುಕ್ತಿದಾಮವನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸುವ ಹಾಗೂ ಭದ್ರತಾ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಅವಶ್ಯಕತೆಯೂ ಇದೆ ಮುಂದಿನ ದಿನಗಳಲ್ಲಿ ಈ ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕವೂ ಇಂತಹ ಕಾರ್ಯಕ್ಕೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಮಾತನಾಡಿ ಕಳೆದ ಕೆಲವು ವರ್ಷಗಳಿಂದ ಗ್ರಾಮದಲ್ಲಿ ರುದ್ರಭೂಮಿ ಭೂಮಿಯ ಸಮಸ್ಯೆ ಮನಗೊಂಡು ಸ್ಥಳೀಯವಾಗಿ ಚರ್ಚಿಸಿದಾಗ ರುದ್ರಭೂಮಿ ನಿರ್ಮಾಣದ ಬಗ್ಗೆ ಸ್ಥಳೀಯರು ಆಸಕ್ತಿ ವಹಿಸಿದ್ದು ಸುಮಾರು 7.20ಲಕ್ಷ ವೆಚ್ಚದಲ್ಲಿ ಮೊದಲ ಕಾಮಗಾರಿ ಪೂರ್ಣಗೊಂಡಿದ್ದು ಇದಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು 2.60ಲಕ್ಷ ವೆಚ್ಚದ ಸಹಾಯಹಸ್ತ ದೊರಕ್ಕಿದ್ದು ಸಾರ್ವಜನಿಕರಿಗೆ ದಹನ ಕ್ರಿಯೆಗೆ ಅನುಕೂಲ ಆಗುವಂತೆ ರುದ್ರಭೂಮಿ ನಿರ್ಮಾಣವಾಗಿದೆ ಮುಂದಕ್ಕೂ ಸಾರ್ವಜನಿಕರೂ ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದ್ದು ಎಲ್ಲರೂ ಕೈಜೋಡಿಸುವ ಮೂಲಕ ಸ್ವಚ್ಛ ನೈರ್ಮಲ್ಯ ಮಾದರಿ ರುದ್ರಭೂಮಿ ಆಗಲಿ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಾವಿತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ್, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಸೂರಜ್ , ಸ್ಥಳೀಯರಾದ ಪ್ರಭಾಕರ ಶೆಣೈ, ಕಿಶೋರ್ ಕುರುಡ್ಯ, ಆನಂದ ಗೌಡ ಬರೆಮೇಲು, ರಾಘವೇಂದ್ರ ಭಟ್, ರೇಣುಕಾ, ಹೇಮಾವತಿ, ಚಂದ್ರಾವತಿ, ಸಂಜೀವ ಗೌಡ ನೂಜಿ, ರಶ್ಮಿ, ಶ್ರೀನಿವಾಸ ಗೌಡ, ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya
error: Content is protected !!