23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 12-13 ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.

ಫೆ. 12 ರಂದು ಬೆಳಗ್ಗೆ ಗಂಟೆ 8-00ಕ್ಕೆ ಪ್ರಾರ್ಥನೆ, 8-30ಕ್ಕೆ ದೈವದ ಭಂಡಾರ ಬರುವುದು, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸ್ವಸ್ತಿ ಪುಣ್ಯಾಹವಾಚನ, ಶುದ್ದಿಗಳು ಗಣಪತಿ ಹೋಮ, ಪಂಚವಿಂಶತಿ ಕಲಶಪೂರಣೆ, ಕಲಶಪೂಜೆ ಪ್ರಧಾನ ಹೋಮ ಕಲಶಾಭಿಷೇಕ, ಪಂಚಪರ್ವ ಧ್ವಜಾರೋಹಣ, ಬಲಿ ಉತ್ಸವ, ಮಧ್ಯಾಹ್ನ ಗಂಟೆ 1-00ರಿಂದ ಅನ್ನಸಂತರ್ಪಣೆ. ಸಂಜೆ ಗಂಟೆ 6-30ಕ್ಕೆ ದೈವದ ಬಲಿ ಉತ್ಸವ , ರಾತ್ರಿ ಗಂಟೆ 9-30ರಿಂದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ
ಫೆ. 13 ರಂದು ಬೆಳಿಗ್ಗೆ 5:30 ಕ್ಕೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ 8-30ಕ್ಕೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಲಿದೆ.

Related posts

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya
error: Content is protected !!