ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 12-13 ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.

ಫೆ. 12 ರಂದು ಬೆಳಗ್ಗೆ ಗಂಟೆ 8-00ಕ್ಕೆ ಪ್ರಾರ್ಥನೆ, 8-30ಕ್ಕೆ ದೈವದ ಭಂಡಾರ ಬರುವುದು, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸ್ವಸ್ತಿ ಪುಣ್ಯಾಹವಾಚನ, ಶುದ್ದಿಗಳು ಗಣಪತಿ ಹೋಮ, ಪಂಚವಿಂಶತಿ ಕಲಶಪೂರಣೆ, ಕಲಶಪೂಜೆ ಪ್ರಧಾನ ಹೋಮ ಕಲಶಾಭಿಷೇಕ, ಪಂಚಪರ್ವ ಧ್ವಜಾರೋಹಣ, ಬಲಿ ಉತ್ಸವ, ಮಧ್ಯಾಹ್ನ ಗಂಟೆ 1-00ರಿಂದ ಅನ್ನಸಂತರ್ಪಣೆ. ಸಂಜೆ ಗಂಟೆ 6-30ಕ್ಕೆ ದೈವದ ಬಲಿ ಉತ್ಸವ , ರಾತ್ರಿ ಗಂಟೆ 9-30ರಿಂದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ
ಫೆ. 13 ರಂದು ಬೆಳಿಗ್ಗೆ 5:30 ಕ್ಕೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ 8-30ಕ್ಕೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಲಿದೆ.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya
error: Content is protected !!