ಶಿರ್ಲಾಲು : ಇಲ್ಲಿಯ ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮುಖ್ಯಸ್ಥ ಶ್ರೀಧರ ಪೂಜಾರಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಸತ್ಯದೇವತೆ ಆಡಳಿತದಾರ ಶಿವಪ್ರಸಾದ್ ಅಜಿಲರು, ಪ್ರಗತಿಪರ ಕೃಷಿಕ ಎಂ ಗಂಗಾಧರ ಮಿತ್ತಮಾರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಖ್ಯಾತ ಕಂಬಳ ಆಟಗಾರ ಸತೀಶ್ ದೇವಾಡಿಗ, ಆಂಬುಲೆನ್ಸ್ ಚಾಲಕ ಅಶ್ವತ್ ಕುಲಾಲ್, ದೇವಸ್ಥಾನದ ಅರ್ಚಕರಾದ ಸೂರ್ಯನಾರಾಯಣ ರಾವ್, ಭಜನಾ ಮಂಡಳಿಯ ಅಧ್ಯಕ್ಷ ಪ್ರಭಾಕರ ನಾಯ್ಕ ಮಹಿಳಾ ಕೇಂದ್ರದ ಅಧ್ಯಕ್ಷರಾದ ರಮಣಿ ಕಾಯರ್ ಮಜಲು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಾಲ್ಕು ಜನರಿಗೆ ಸನ್ಮಾನ ಮಾಡಲಾಯಿತು . ಬಳಿಕ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಿ ಶ್ರೀ ಲೋಕನಾಥೇಶ್ವರ ದೇವರ ಭಕ್ತಿ ಧ್ವನಿಸುರುಳಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಆಡಳಿತ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು, ಸದಸ್ಯರು , ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.











