25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

ಮಲವಂತಿಗೆ ಗ್ರಾ.ಪಂ ನಲ್ಲಿ ಸತತ 7 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಇಂದಬೆಟ್ಟು ಗ್ರಾ.ಪಂ. ಗೆ ವರ್ಗಾವಣೆಗೊಂಡ ರಶ್ಮಿ ಬಿ.ಪಿ ಅವರನ್ನು ಫೆ. 5ರಂದು ಪಂಚಾಯತ್ ಸಭಾಂಗಣದಲ್ಲಿ ಬಿಳ್ಕೋಡಲಾಯಿತು.

ಇದೇ ಸಂದರ್ಭದಲ್ಲಿ ಕಳೆದ 5ವರ್ಷಗಳ ಅವಧಿಯಲ್ಲಿ ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಗೌರವಿಸಲಾಯಿತು.

ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ 7ವರ್ಷ ಪಿಡಿಒ ರವರು ಪಂಚಾಯತ್ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದ ಅವರು ಕಳೆದ 5 ವರ್ಷ ಆಡಳಿತ ಅವಧಿಯಲ್ಲಿ ಸಹಕಾರ ನೀಡಿದ ಆಡಳಿತ ಮಂಡಳಿಗೆ, ಅಧಿಕಾರಿಗಳಿಗೆ, ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೂತನ ಪಿಡಿಒ ಮೋಹನ್ ಬಂಗೇರ ಕೆ. ವಿಎ ಸಂತೋಷ್, ಸದಸ್ಯರು, ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಹಾಗೂ ಕೃಷಿ ಸಖಯರು ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿ ಅಕ್ಷತಾ ಪ್ರಾರ್ಥಿಸಿ, ಶ್ರೀಮತಿ ಕಾಂತಿ ದಿನೇಶ್ ಸ್ವಾಗತಿಸಿ, ಪಿಡಿಒ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸದಾಶಿವ ಎ ಧನ್ಯವಾದವಿತ್ತರು.

Related posts

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
error: Content is protected !!