ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

ಮಲವಂತಿಗೆ ಗ್ರಾ.ಪಂ ನಲ್ಲಿ ಸತತ 7 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಇಂದಬೆಟ್ಟು ಗ್ರಾ.ಪಂ. ಗೆ ವರ್ಗಾವಣೆಗೊಂಡ ರಶ್ಮಿ ಬಿ.ಪಿ ಅವರನ್ನು ಫೆ. 5ರಂದು ಪಂಚಾಯತ್ ಸಭಾಂಗಣದಲ್ಲಿ ಬಿಳ್ಕೋಡಲಾಯಿತು.

ಇದೇ ಸಂದರ್ಭದಲ್ಲಿ ಕಳೆದ 5ವರ್ಷಗಳ ಅವಧಿಯಲ್ಲಿ ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಗೌರವಿಸಲಾಯಿತು.

ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ 7ವರ್ಷ ಪಿಡಿಒ ರವರು ಪಂಚಾಯತ್ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದ ಅವರು ಕಳೆದ 5 ವರ್ಷ ಆಡಳಿತ ಅವಧಿಯಲ್ಲಿ ಸಹಕಾರ ನೀಡಿದ ಆಡಳಿತ ಮಂಡಳಿಗೆ, ಅಧಿಕಾರಿಗಳಿಗೆ, ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೂತನ ಪಿಡಿಒ ಮೋಹನ್ ಬಂಗೇರ ಕೆ. ವಿಎ ಸಂತೋಷ್, ಸದಸ್ಯರು, ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಹಾಗೂ ಕೃಷಿ ಸಖಯರು ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿ ಅಕ್ಷತಾ ಪ್ರಾರ್ಥಿಸಿ, ಶ್ರೀಮತಿ ಕಾಂತಿ ದಿನೇಶ್ ಸ್ವಾಗತಿಸಿ, ಪಿಡಿಒ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸದಾಶಿವ ಎ ಧನ್ಯವಾದವಿತ್ತರು.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya
error: Content is protected !!