26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

ಬೆಳ್ತಂಗಡಿ; ಉಳ್ತೂರು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮುರ್ಶಿದುಲ್ ಅನಾಂ ದರ್ಸ್ ಉಳ್ತೂರು ಇದರ ದರ್ಸ್ ವಾರ್ಷಿಕ, ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಮರ್ಹೂಂ ಮುಹಮ್ಮದ್ ಫಾಳಿಲಿ ಅನುಸ್ಮರಣೆಯು ಜಮಾಅತ್ ಅಧ್ಯಕ್ಷ ಕೆ.ಎಚ್ ಅಝೀಝುದ್ದೀನ್ ರವರ ಅಧ್ಯಕ್ಷತೆಯಲ್ಲಿ ಮಸ್ಜಿದ್ ವಠಾರದಲ್ಲಿ ನಡೆಯಿತು.

ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ರವರು ಅನುಸ್ಮರಣೆಗೆ ನೇತೃತ್ವ ನೀಡಿ ದುಆಶೀರ್ವಚನ ನೀಡಿದರು. ಪಾಂಡಿಯಾಳ್ ಮುದರ್ರಿಸ್ ಉಸ್ತಾದ್ ಐ.ಎಂ.ಉಮರ್ ಅಹ್ಸನಿ ಇನೋಳಿ ಸಭೆಯನ್ನು ಉದ್ಘಾಟಿಸಿ ದರು. ಉಳ್ತೂರು ಮುದರ್ರಿಸ್ ಮುಹಮ್ಮದ್ ತೌಸೀಫ್ ಸಅದಿ ಹರೇಕಳ ರವರು ದಿಕ್ಸೂಚಿ ಭಾಷಣ ಮಾಡಿದರು. ಖ್ಯಾತ ವಾಗ್ಮಿ ಹಂಝ ಮಿಸ್ಬಾಹಿ ಓಟ್ಟಪಡವು ಮುಖ್ಯ ಭಾಷಣ ಮಾಡಿದರು. ಬಶೀರ್ ಲತೀಫಿ ಮದ್ದಡ್ಕ, ನೆಲ್ವಿಸ್ಟರ್ ಪಿಂಟೋ, ಚಂದ್ರಶೇಖರ್ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿ ಗಳಿಗೆ ತೆರಳುವ ವಿದ್ಯಾರ್ಥಿಗಳಾದ ಸಾಬಿತ್ ಎಮ್ಮೆಮ್ಮಾಡು, ಝೈನುಲ್ ಆಬಿದ್ ಕನಕಮಜಲು, ಹಾಶಿರ್ ಕೊಯ್ಯೂರು ರವರಿಗೆ ಬೀಳ್ಕೊಡುಗೆ ನೀಡಲಾಯಿತು.

ಸಯ್ಯಿದ್ ಮುಸ್ತಫ ತಂಙಳ್ ಉಳ್ತೂರು, ಸಯ್ಯಿದ್ ಶರಪುದ್ದೀನ್ ತಂಙಳ್ ವೇಣೂರು, ನವಾಝ್ ಸಅದಿ ಕಕ್ಕೆ ಪದವು, ನಈಮುದ್ದೀನ್ ಅಝ್‌ಹರಿ ಪಿಲ್ಯ, ಪಿ.ಎ ಮುಹಮ್ಮದ್ ಮುಸ್ಲಿಯಾರ್ ಉಳ್ತೂರು, ತಾಜುದ್ದೀನ್ ಸಖಾಫಿ ಪುಲಾಬೆ, ಮನ್ಸೂರ್ ಸಖಾಫಿ ಕಬಕ ಗೋಳಿಯಂಗಡಿ, ಯು. ಅಬ್ಬಾಸ್ ಹಾಜಿ, ಯು.ಎಂ ಅಬ್ದುರಹ್ಮಾನ್, ಯು.ಎಂ ಸಯ್ಯದ್ ಹಸನ್, ಯು.ಎಚ್ ಇಬ್ರಾಹಿಂ, ಪಿ.ಇಸ್ಮಾಈಲ್ ಶಾಂತಿನಗರ, ಬಿ.ಮುಹಮ್ಮದ್, ರಶೀದ್ ಮಡಂತ್ಯಾರ್, ಸಯ್ಯಿದ್ ಸಲೀತ್ ತಂಙಳ್, ತೌಫೀಕ್ ವೇಣೂರು ಮುಂತಾದವರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಮುಈನಿ ಸ್ವಾಗತಿಸಿ, ಕೆ.ಎಚ್ ಸಿರಾಜುದ್ದೀನ್ ಝಹ್ರಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!