July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

ಮಲವಂತಿಗೆ ಗ್ರಾ.ಪಂ ನಲ್ಲಿ ಸತತ 7 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಇಂದಬೆಟ್ಟು ಗ್ರಾ.ಪಂ. ಗೆ ವರ್ಗಾವಣೆಗೊಂಡ ರಶ್ಮಿ ಬಿ.ಪಿ ಅವರನ್ನು ಫೆ. 5ರಂದು ಪಂಚಾಯತ್ ಸಭಾಂಗಣದಲ್ಲಿ ಬಿಳ್ಕೋಡಲಾಯಿತು.

ಇದೇ ಸಂದರ್ಭದಲ್ಲಿ ಕಳೆದ 5ವರ್ಷಗಳ ಅವಧಿಯಲ್ಲಿ ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಗೌರವಿಸಲಾಯಿತು.

ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ 7ವರ್ಷ ಪಿಡಿಒ ರವರು ಪಂಚಾಯತ್ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದ ಅವರು ಕಳೆದ 5 ವರ್ಷ ಆಡಳಿತ ಅವಧಿಯಲ್ಲಿ ಸಹಕಾರ ನೀಡಿದ ಆಡಳಿತ ಮಂಡಳಿಗೆ, ಅಧಿಕಾರಿಗಳಿಗೆ, ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೂತನ ಪಿಡಿಒ ಮೋಹನ್ ಬಂಗೇರ ಕೆ. ವಿಎ ಸಂತೋಷ್, ಸದಸ್ಯರು, ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಹಾಗೂ ಕೃಷಿ ಸಖಯರು ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿ ಅಕ್ಷತಾ ಪ್ರಾರ್ಥಿಸಿ, ಶ್ರೀಮತಿ ಕಾಂತಿ ದಿನೇಶ್ ಸ್ವಾಗತಿಸಿ, ಪಿಡಿಒ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸದಾಶಿವ ಎ ಧನ್ಯವಾದವಿತ್ತರು.

Related posts

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!