ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು, ಇಂದು ಸಂಜೆಯ ಹೊತ್ತಿಗೆ ಶಿರ್ಲಾಲು ಪೇಟೆಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯ ಮಾಧವ ಸುದ್ದಿ ಉದಯಕ್ಕೆ ತಿಳಿಸಿರುತ್ತಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ











