July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

ಗುರುವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ ಹಾಗೂ ಪ್ರಯೋಗಲಯ ಉದ್ಘಾಟನೆಯು ಫೆ 8 ರಂದು ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣಗೊಳಿಸಿ ಶುಭ ಕೋರಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ನೇರವೇರಿಸಿ ಮಾತನಾಡಿ ನಾವು ಮಾಡು ಕಾಯಕದಲ್ಲಿ ಇಚ್ಛಾಶಕ್ತಿ ಮತ್ತು ಬದ್ದತೆಯಿದ್ದಾಗ ಸಂಸ್ಥೆಯು ಮೇಲ್ಪಂಕ್ತಿಯಲ್ಲಿ ಸಾಗುತ್ತದೆ.ವಿದ್ವತ್ ವಿದ್ಯಾಲಯ ಶ್ರೇಷ್ಠ ಸಂಸ್ಥೆಯಾಗಿ ಬೆಳೆಯುತ್ತದೆ ಎಂಬ ಆತ್ಮವಿಶ್ವಾಸ ನಂಬಿಕೆ ನಮಗಿದೆ ಎಂದರು.

ಭೌತಶಾಸ್ತ್ರ ವಿಭಾಗದ ಪ್ರಯೋಗಲಯದ ಉದ್ಘಾಟನೆಯನ್ನು ಬೆಳ್ತಂಗಡಿ ತಹಿಶೀಲ್ದಾರ್ ಪೃಥ್ವಿ ಸಾನಿಕಮ್ ಉದ್ಘಾಟಿಸಿದರು. ರಾಸಾಯನ ಶಾಸ್ತ್ರ ವಿಭಾಗದ ಪ್ರಯೋಗಲಯವನ್ನು ಫಾ.ಜೋಸೇಫ್ ವಲಿಯಪರಂಬಿಲ್ ನೇರವೇರಿಸಿದರು. ಜೀವಶಾಸ್ತ್ರ ವಿಭಾಗದ ಪ್ರಯೋಗಲಯದ ಉದ್ಘಾಟನೆಯನ್ನು ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ ಉದ್ಘಾಟಿಸಿ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಸುಭಾಶ್ವಂದ್ರ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಜ್ವಲ್ ರೈ,ಕೋಶಾಧಿಕಾರಿ ಕಾಶಿನಾಥ್ ಭಟ್, ಟ್ರಸ್ಟಿಗಳಾದ ಸುಚಿತ್ರಾ ಶೆಟ್ಟಿ, ರೇಶ್ಮಾ ಸುಭಾಶ್ವಂದ್ರ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಅವರನ್ನು ವಿದ್ವತ್ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥನೆಗೈದರು,ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ ಮಂಡಲೆಗಳಲೆ ಸ್ವಾಗತಿಸಿದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ಬಾಬು ಡಿ.ಎಮ್ ಪ್ರಸ್ತಾವಣೆಗೈದರು.ಬಾಲಕೃಷ್ಣ ಪೊರ್ದಾಲ್ ನಿರೂಪಿಸಿದರು,ಸಾರ್ವಜನಿಕ ಸಂಪರ್ಕಾಧಿಕಾರಿ ಚೈತ್ರೇಶ್ ಸಂದೇಶ ವಾಚನ ಮಾಡಿದರು.ಪ್ರಾಂಶುಪಾಲರಾದ ಹರೀಶ್ ಕೆ.ಆರ್ ವಂದಿಸಿದರು.ಉಪನ್ಯಾಸಕರಾದ ಬಸವಕಿರಣ ಜೆ‌ಎಚ್,ದಿವ್ಯಶ್ರೀ ಸನ್ಮಾನಿತರ ಪರಿಚಯ ವಾಚಿಸಿದರು.ಆಡಳಿತಧಿಕಾರಿ ಅಶೋಕ್ ಕುಮಾರ್ ಶೆಟ್ಟಿ ಮತ್ತು ಉಪನ್ಯಾಸಕ ವೃಂದದವರು ಸಹಕರಿಸಿದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya
error: Content is protected !!