September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

ಗುರುವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ ಹಾಗೂ ಪ್ರಯೋಗಲಯ ಉದ್ಘಾಟನೆಯು ಫೆ 8 ರಂದು ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣಗೊಳಿಸಿ ಶುಭ ಕೋರಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ನೇರವೇರಿಸಿ ಮಾತನಾಡಿ ನಾವು ಮಾಡು ಕಾಯಕದಲ್ಲಿ ಇಚ್ಛಾಶಕ್ತಿ ಮತ್ತು ಬದ್ದತೆಯಿದ್ದಾಗ ಸಂಸ್ಥೆಯು ಮೇಲ್ಪಂಕ್ತಿಯಲ್ಲಿ ಸಾಗುತ್ತದೆ.ವಿದ್ವತ್ ವಿದ್ಯಾಲಯ ಶ್ರೇಷ್ಠ ಸಂಸ್ಥೆಯಾಗಿ ಬೆಳೆಯುತ್ತದೆ ಎಂಬ ಆತ್ಮವಿಶ್ವಾಸ ನಂಬಿಕೆ ನಮಗಿದೆ ಎಂದರು.

ಭೌತಶಾಸ್ತ್ರ ವಿಭಾಗದ ಪ್ರಯೋಗಲಯದ ಉದ್ಘಾಟನೆಯನ್ನು ಬೆಳ್ತಂಗಡಿ ತಹಿಶೀಲ್ದಾರ್ ಪೃಥ್ವಿ ಸಾನಿಕಮ್ ಉದ್ಘಾಟಿಸಿದರು. ರಾಸಾಯನ ಶಾಸ್ತ್ರ ವಿಭಾಗದ ಪ್ರಯೋಗಲಯವನ್ನು ಫಾ.ಜೋಸೇಫ್ ವಲಿಯಪರಂಬಿಲ್ ನೇರವೇರಿಸಿದರು. ಜೀವಶಾಸ್ತ್ರ ವಿಭಾಗದ ಪ್ರಯೋಗಲಯದ ಉದ್ಘಾಟನೆಯನ್ನು ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ ಉದ್ಘಾಟಿಸಿ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಸುಭಾಶ್ವಂದ್ರ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಜ್ವಲ್ ರೈ,ಕೋಶಾಧಿಕಾರಿ ಕಾಶಿನಾಥ್ ಭಟ್, ಟ್ರಸ್ಟಿಗಳಾದ ಸುಚಿತ್ರಾ ಶೆಟ್ಟಿ, ರೇಶ್ಮಾ ಸುಭಾಶ್ವಂದ್ರ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಅವರನ್ನು ವಿದ್ವತ್ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥನೆಗೈದರು,ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ ಮಂಡಲೆಗಳಲೆ ಸ್ವಾಗತಿಸಿದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ಬಾಬು ಡಿ.ಎಮ್ ಪ್ರಸ್ತಾವಣೆಗೈದರು.ಬಾಲಕೃಷ್ಣ ಪೊರ್ದಾಲ್ ನಿರೂಪಿಸಿದರು,ಸಾರ್ವಜನಿಕ ಸಂಪರ್ಕಾಧಿಕಾರಿ ಚೈತ್ರೇಶ್ ಸಂದೇಶ ವಾಚನ ಮಾಡಿದರು.ಪ್ರಾಂಶುಪಾಲರಾದ ಹರೀಶ್ ಕೆ.ಆರ್ ವಂದಿಸಿದರು.ಉಪನ್ಯಾಸಕರಾದ ಬಸವಕಿರಣ ಜೆ‌ಎಚ್,ದಿವ್ಯಶ್ರೀ ಸನ್ಮಾನಿತರ ಪರಿಚಯ ವಾಚಿಸಿದರು.ಆಡಳಿತಧಿಕಾರಿ ಅಶೋಕ್ ಕುಮಾರ್ ಶೆಟ್ಟಿ ಮತ್ತು ಉಪನ್ಯಾಸಕ ವೃಂದದವರು ಸಹಕರಿಸಿದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಐದು ದೇವರ ಗುಡಿಗಳ ಶಿಲಾನ್ಯಾಸ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya
error: Content is protected !!