23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

ಗುರುವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ ಹಾಗೂ ಪ್ರಯೋಗಲಯ ಉದ್ಘಾಟನೆಯು ಫೆ 8 ರಂದು ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣಗೊಳಿಸಿ ಶುಭ ಕೋರಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ನೇರವೇರಿಸಿ ಮಾತನಾಡಿ ನಾವು ಮಾಡು ಕಾಯಕದಲ್ಲಿ ಇಚ್ಛಾಶಕ್ತಿ ಮತ್ತು ಬದ್ದತೆಯಿದ್ದಾಗ ಸಂಸ್ಥೆಯು ಮೇಲ್ಪಂಕ್ತಿಯಲ್ಲಿ ಸಾಗುತ್ತದೆ.ವಿದ್ವತ್ ವಿದ್ಯಾಲಯ ಶ್ರೇಷ್ಠ ಸಂಸ್ಥೆಯಾಗಿ ಬೆಳೆಯುತ್ತದೆ ಎಂಬ ಆತ್ಮವಿಶ್ವಾಸ ನಂಬಿಕೆ ನಮಗಿದೆ ಎಂದರು.

ಭೌತಶಾಸ್ತ್ರ ವಿಭಾಗದ ಪ್ರಯೋಗಲಯದ ಉದ್ಘಾಟನೆಯನ್ನು ಬೆಳ್ತಂಗಡಿ ತಹಿಶೀಲ್ದಾರ್ ಪೃಥ್ವಿ ಸಾನಿಕಮ್ ಉದ್ಘಾಟಿಸಿದರು. ರಾಸಾಯನ ಶಾಸ್ತ್ರ ವಿಭಾಗದ ಪ್ರಯೋಗಲಯವನ್ನು ಫಾ.ಜೋಸೇಫ್ ವಲಿಯಪರಂಬಿಲ್ ನೇರವೇರಿಸಿದರು. ಜೀವಶಾಸ್ತ್ರ ವಿಭಾಗದ ಪ್ರಯೋಗಲಯದ ಉದ್ಘಾಟನೆಯನ್ನು ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ ಉದ್ಘಾಟಿಸಿ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಸುಭಾಶ್ವಂದ್ರ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಜ್ವಲ್ ರೈ,ಕೋಶಾಧಿಕಾರಿ ಕಾಶಿನಾಥ್ ಭಟ್, ಟ್ರಸ್ಟಿಗಳಾದ ಸುಚಿತ್ರಾ ಶೆಟ್ಟಿ, ರೇಶ್ಮಾ ಸುಭಾಶ್ವಂದ್ರ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಅವರನ್ನು ವಿದ್ವತ್ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥನೆಗೈದರು,ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ ಮಂಡಲೆಗಳಲೆ ಸ್ವಾಗತಿಸಿದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ಬಾಬು ಡಿ.ಎಮ್ ಪ್ರಸ್ತಾವಣೆಗೈದರು.ಬಾಲಕೃಷ್ಣ ಪೊರ್ದಾಲ್ ನಿರೂಪಿಸಿದರು,ಸಾರ್ವಜನಿಕ ಸಂಪರ್ಕಾಧಿಕಾರಿ ಚೈತ್ರೇಶ್ ಸಂದೇಶ ವಾಚನ ಮಾಡಿದರು.ಪ್ರಾಂಶುಪಾಲರಾದ ಹರೀಶ್ ಕೆ.ಆರ್ ವಂದಿಸಿದರು.ಉಪನ್ಯಾಸಕರಾದ ಬಸವಕಿರಣ ಜೆ‌ಎಚ್,ದಿವ್ಯಶ್ರೀ ಸನ್ಮಾನಿತರ ಪರಿಚಯ ವಾಚಿಸಿದರು.ಆಡಳಿತಧಿಕಾರಿ ಅಶೋಕ್ ಕುಮಾರ್ ಶೆಟ್ಟಿ ಮತ್ತು ಉಪನ್ಯಾಸಕ ವೃಂದದವರು ಸಹಕರಿಸಿದರು.

Related posts

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya
error: Content is protected !!