25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ. 9 ರಿಂದ ಪ್ರಾರಂಭಗೊಂಡು ಫೆ.11 ರವರೆಗೆ ನಡೆಯಲಿದೆ.

ಇಂದು ಕಾಪುವಿನಲ್ಲಿ ಬೆಳಿಗ್ಗೆ ತೋರಣ ಮುಹೂರ್ತ , ಭಂಡಾರ ಹಿಡಿಯುವುದು, ಬ್ರಹ್ಮರು, ಕುಮಾರ ಬೊಳ್ಯಾ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಶಂಕರನಾರಾಯಣ ಭಟ್, ಅಧ್ಯಕ್ಷ ಧರ್ಣಪ್ಪ ಗೌಡ, ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಉಪಾಧ್ಯಕ್ಷ ಐತ್ತಪ್ಪ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಸದಸ್ಯರಾದ ಪಿ. ಪಾಂಡುರಂಗ ಮರಾಠೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಫೆ.10 ರಂದು ಬೆಳಗ್ಗೆ ತೋರಣ ಮುಹೂರ್ತ, ಮಧ್ಯಾಹ್ನ ಗಂಟೆ 2-00ಕ್ಕೆ : ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು. ಸಂಜೆ ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬೆಳಗ್ಗಿನ ತನಕ ಬ್ರಹ್ಮರು, ರುದ್ರಚಾಮುಂಡಿ, ಕಲ್ಲುಡ, ಕಲ್ಲುರ್ಟಿ, ಪಂಜುರ್ಲಿ ಇತ್ಯಾದಿ ದೈವಗಳ “ನೇಮೋತ್ಸವ” ಸಾಯಂಕಾಲ ಗಂಟೆ 6.00ರಿಂದಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ ಗಂಟೆ 7.00ರಿಂದ ಕದಂಬ ತುಳು ನಾಟಕ ನಡೆಯಲಿದೆ.

ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ” ಮಧ್ಯಾಹ್ನ “ಅನ್ನಸಂತರ್ಪಣೆ” ನಡೆಯಲಿದೆ.

Related posts

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya
error: Content is protected !!