ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಸುದೇಮುಗೇರು ವಿದ್ಯಾರ್ಥಿನಿ ಇಂದು(ಫೆ.9) ಬೆಳಿಗ್ಗೆ ಸುಮಾರು 8.45 ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಕಾಲೇಜಿಗೆ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಮಾರುತಿ ಓಮ್ನಿ ಕಾರಿನಲ್ಲಿ ಬಂದ ಮೂರು ಮಂದಿ ಮುಸುಕುಧಾರಿಗಳ ತಂಡ ದ್ವಿಚಕ್ರವಾಹವನ್ನು ತಡೆಗಟ್ಟಿ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿ ಬಳಿಕ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ಇಂದು(ಫೆ.9) ಬೆಳಿಗ್ಗೆ ನಡೆದಿದೆ.

ಹಲ್ಲೆಗೆ ಒಳಗಾದ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಬೆಳ್ತಂಗಡಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!