July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 19 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಅಂಗವಾಗಿ ಹೊರಕಾಣಿಕೆ ಹಾಗೂ ಭಜನೋತ್ಸವ ಕಾರ್ಯಕ್ರಮ ನಡೆಯಿತು.

ಹಸಿರುವಾಣಿ ಹೊರಕಾಣಿಕೆಯನ್ನು ಪ್ರಗತಿಪರ ಕೃಷಿಕ ದೇವಿ ಪ್ರಸಾದ್ ಕಡಮ್ಮಾಜೆ ಉದ್ಘಾಟಿಸಿದರು. ಉರುವಾಲು ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭವ್ಯವಾದ ಮೆರವಣಿಗೆಯಲ್ಲಿ ಹೊರಕಾಣಿಕೆಯನ್ನು ತರಲಾಯಿತು.

ಆಹ್ವಾನಿತ ತಂಡದಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸುಧೀರ್ ಕುಮಾರ್ ಹಲೇಜಿ ಕಾರ್ಯಾಧ್ಯಕ್ಷ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಹಲೇಜಿ ಉದ್ಘಾಟಿಸಿ ಮಾತನಾಡಿದರು.

ಈ‌ ಸಂದರ್ಭದಲ್ಲಿ ಶಿಲ್ಪಕಲಾ ಕೇಂದ್ರದ ಅಧ್ಯಕ್ಷ ಪದ್ಮನಾಭ ಶಿಲ್ಪಿ ಪಿಲಿಗೂಡು, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ತರಬೇತುದಾರರಾದ ನಾಗೇಶ್ ನೆರಿಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ವಂದಿಸಿದರು.

Related posts

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!