July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರುಗಿತು.

ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ ಎಲ್ ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ,ನಿತಿನ್ ,ವಸಂತ, ವಿಜಯ, ಶಿವಣ್ಣ,ಕೇಶವ, ಗಣೇಶ, ಸುಕೇಶ್ ,ಸತೀಶ , ವಿಖ್ಯಾತ , ಜಗದೀಶ , ಪದ್ಮಲತ, ಅರುಣ ಭಾಗವಹಿಸಿ ಯೋಗ ಅಭ್ಯಾಸದಿಂದ ಪಡೆದ ಅನುಭವಗಳನ್ನು ತಿಳಿಸಿದರು.

ಯೋಗ ಕೇಂದ್ರದಲ್ಲಿ ನಿತ್ಯವೂ ಭಾಗವಹಿಸಿ ಶಾಖೆಯನ್ನು ನಿರಂತರವಾಗಿ ನಡೆಯುವಂತೆ ಮುಖ್ಯ ಶಿಕ್ಷಕರು ಮಾರ್ಗದರ್ಶನ ನೀಡಿದರು. ಕಳೆದೊಂದು ವರ್ಷದಲ್ಲಿ ಯೋಗ ಕೇಂದ್ರವನ್ನು ನಡೆಸಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಹಶಿಕ್ಷಕ ಸುಕೇಶ್ ಸ್ವಾಗತಿಸಿ, ಸತೀಶ್ ಭಂಡಾರಿ ನಾಳ ವಂದಿಸಿದರು. ಸಂಚಾಲಕರು ಮತ್ತು ವರದಿ ಪ್ರಮುಖರಾದ ವಿಜಯಣ್ಣ ಮತ್ತು ಕೇಶವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದದಲ್ಲಿ ಅಮೃತ ಫಲಹಾರವನ್ನು ನಡೆಸಲಾಯಿತು.

Related posts

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!