September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರುಗಿತು.

ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ ಎಲ್ ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ,ನಿತಿನ್ ,ವಸಂತ, ವಿಜಯ, ಶಿವಣ್ಣ,ಕೇಶವ, ಗಣೇಶ, ಸುಕೇಶ್ ,ಸತೀಶ , ವಿಖ್ಯಾತ , ಜಗದೀಶ , ಪದ್ಮಲತ, ಅರುಣ ಭಾಗವಹಿಸಿ ಯೋಗ ಅಭ್ಯಾಸದಿಂದ ಪಡೆದ ಅನುಭವಗಳನ್ನು ತಿಳಿಸಿದರು.

ಯೋಗ ಕೇಂದ್ರದಲ್ಲಿ ನಿತ್ಯವೂ ಭಾಗವಹಿಸಿ ಶಾಖೆಯನ್ನು ನಿರಂತರವಾಗಿ ನಡೆಯುವಂತೆ ಮುಖ್ಯ ಶಿಕ್ಷಕರು ಮಾರ್ಗದರ್ಶನ ನೀಡಿದರು. ಕಳೆದೊಂದು ವರ್ಷದಲ್ಲಿ ಯೋಗ ಕೇಂದ್ರವನ್ನು ನಡೆಸಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಹಶಿಕ್ಷಕ ಸುಕೇಶ್ ಸ್ವಾಗತಿಸಿ, ಸತೀಶ್ ಭಂಡಾರಿ ನಾಳ ವಂದಿಸಿದರು. ಸಂಚಾಲಕರು ಮತ್ತು ವರದಿ ಪ್ರಮುಖರಾದ ವಿಜಯಣ್ಣ ಮತ್ತು ಕೇಶವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದದಲ್ಲಿ ಅಮೃತ ಫಲಹಾರವನ್ನು ನಡೆಸಲಾಯಿತು.

Related posts

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!