23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇ ಶ್ವರ ಸ್ವಾಮಿ ದೇವಸ್ಥಾನದ ಈಶ್ವರ ಗರ್ಭ ಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಪ್ರಯುಕ್ತ ಹಳೆ ಗರ್ಭ ಗುಡಿಯ ನೆಲಸಮ ಮಾಡುವ ಕಾಯಕ ಪಂಚಾಂಗ ನಿರ್ಮಾಣ ಅಂಗಣವನ್ನು ಅಗೆದು ಕಾಂಕ್ರೀಟ್ ಹಾಕುವುದು ಹಾಗೂ ಹತ್ತು ಹಲವು ಕೆಲಸಗಳನ್ನು ಗ್ರಾಮದ ಸುಮಾರು 200 ಹಿಂದೂ ಭಾಂದವರು ಒಟ್ಟು ಸೇರಿ ಶ್ರಮದಾನ ಮಾಡಿದರು.

ಈ ವೇಳೆ ಶ್ರಮದಾನದಿಂದ ದೇವಾಲಯಕ್ಕೆ ಅಂದಾಜು ಸುಮಾರು 4 ಲಕ್ಷಗಳಷ್ಟು ಉಳಿತಾಯವಾಗಿರುತ್ತದೆ ಎಂದು ಅನುವಂಶಿಯ ಆಡಳಿತ ಮೊಕ್ತೇಸರರು ತಿಳಿಸಿದ್ದು ಈ ರೀತಿಯ ಸಹಕಾರ ಊರಿನ ಭಕ್ತಾದಿಗಳಿಂದ ದೊರಕಿದರೆ ದೇವಾಲಯಗಳ ಅಭಿವೃದ್ಧಿಗೆ ಮುನ್ನುಗಲು ಆಡಳಿತದವರಿಗೆ ಧೈರ್ಯ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಸೇರಿದ ಎಲ್ಲಾ ಕರಸೇವಕರನ್ನು ಅಭಿನಂದಿಸಿ ಮುಂದಿನ ದಿನಗಳಲ್ಲಿ ಸ್ವಚ್ಛತೆ ಚಪ್ಪರ ಹಾಕುವುದು ಇತ್ಯಾದಿ ಬ್ರಹ್ಮ ಕಲಶದ ಪೂರ್ವ ಭಾವಿ ಕೆಲಸಗಳು ನಡೆಯಲಿದೆ . ಮಾ.29ರಿಂದ ಎ.6 ರವರೆಗೆ ನಡೆಯುವ ಶ್ರೀ ದೇವರ ಬ್ರಹ್ಮಕಲಶ ಇತ್ಯಾದಿಗಳಿಗೆ ಎಲ್ಲರ ಸಹಕಾರವನ್ನು ಕೋರಿದರು.

Related posts

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya
error: Content is protected !!