July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇ ಶ್ವರ ಸ್ವಾಮಿ ದೇವಸ್ಥಾನದ ಈಶ್ವರ ಗರ್ಭ ಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಪ್ರಯುಕ್ತ ಹಳೆ ಗರ್ಭ ಗುಡಿಯ ನೆಲಸಮ ಮಾಡುವ ಕಾಯಕ ಪಂಚಾಂಗ ನಿರ್ಮಾಣ ಅಂಗಣವನ್ನು ಅಗೆದು ಕಾಂಕ್ರೀಟ್ ಹಾಕುವುದು ಹಾಗೂ ಹತ್ತು ಹಲವು ಕೆಲಸಗಳನ್ನು ಗ್ರಾಮದ ಸುಮಾರು 200 ಹಿಂದೂ ಭಾಂದವರು ಒಟ್ಟು ಸೇರಿ ಶ್ರಮದಾನ ಮಾಡಿದರು.

ಈ ವೇಳೆ ಶ್ರಮದಾನದಿಂದ ದೇವಾಲಯಕ್ಕೆ ಅಂದಾಜು ಸುಮಾರು 4 ಲಕ್ಷಗಳಷ್ಟು ಉಳಿತಾಯವಾಗಿರುತ್ತದೆ ಎಂದು ಅನುವಂಶಿಯ ಆಡಳಿತ ಮೊಕ್ತೇಸರರು ತಿಳಿಸಿದ್ದು ಈ ರೀತಿಯ ಸಹಕಾರ ಊರಿನ ಭಕ್ತಾದಿಗಳಿಂದ ದೊರಕಿದರೆ ದೇವಾಲಯಗಳ ಅಭಿವೃದ್ಧಿಗೆ ಮುನ್ನುಗಲು ಆಡಳಿತದವರಿಗೆ ಧೈರ್ಯ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಸೇರಿದ ಎಲ್ಲಾ ಕರಸೇವಕರನ್ನು ಅಭಿನಂದಿಸಿ ಮುಂದಿನ ದಿನಗಳಲ್ಲಿ ಸ್ವಚ್ಛತೆ ಚಪ್ಪರ ಹಾಕುವುದು ಇತ್ಯಾದಿ ಬ್ರಹ್ಮ ಕಲಶದ ಪೂರ್ವ ಭಾವಿ ಕೆಲಸಗಳು ನಡೆಯಲಿದೆ . ಮಾ.29ರಿಂದ ಎ.6 ರವರೆಗೆ ನಡೆಯುವ ಶ್ರೀ ದೇವರ ಬ್ರಹ್ಮಕಲಶ ಇತ್ಯಾದಿಗಳಿಗೆ ಎಲ್ಲರ ಸಹಕಾರವನ್ನು ಕೋರಿದರು.

Related posts

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

Suddi Udaya
error: Content is protected !!