25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇ ಶ್ವರ ಸ್ವಾಮಿ ದೇವಸ್ಥಾನದ ಈಶ್ವರ ಗರ್ಭ ಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಪ್ರಯುಕ್ತ ಹಳೆ ಗರ್ಭ ಗುಡಿಯ ನೆಲಸಮ ಮಾಡುವ ಕಾಯಕ ಪಂಚಾಂಗ ನಿರ್ಮಾಣ ಅಂಗಣವನ್ನು ಅಗೆದು ಕಾಂಕ್ರೀಟ್ ಹಾಕುವುದು ಹಾಗೂ ಹತ್ತು ಹಲವು ಕೆಲಸಗಳನ್ನು ಗ್ರಾಮದ ಸುಮಾರು 200 ಹಿಂದೂ ಭಾಂದವರು ಒಟ್ಟು ಸೇರಿ ಶ್ರಮದಾನ ಮಾಡಿದರು.

ಈ ವೇಳೆ ಶ್ರಮದಾನದಿಂದ ದೇವಾಲಯಕ್ಕೆ ಅಂದಾಜು ಸುಮಾರು 4 ಲಕ್ಷಗಳಷ್ಟು ಉಳಿತಾಯವಾಗಿರುತ್ತದೆ ಎಂದು ಅನುವಂಶಿಯ ಆಡಳಿತ ಮೊಕ್ತೇಸರರು ತಿಳಿಸಿದ್ದು ಈ ರೀತಿಯ ಸಹಕಾರ ಊರಿನ ಭಕ್ತಾದಿಗಳಿಂದ ದೊರಕಿದರೆ ದೇವಾಲಯಗಳ ಅಭಿವೃದ್ಧಿಗೆ ಮುನ್ನುಗಲು ಆಡಳಿತದವರಿಗೆ ಧೈರ್ಯ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಸೇರಿದ ಎಲ್ಲಾ ಕರಸೇವಕರನ್ನು ಅಭಿನಂದಿಸಿ ಮುಂದಿನ ದಿನಗಳಲ್ಲಿ ಸ್ವಚ್ಛತೆ ಚಪ್ಪರ ಹಾಕುವುದು ಇತ್ಯಾದಿ ಬ್ರಹ್ಮ ಕಲಶದ ಪೂರ್ವ ಭಾವಿ ಕೆಲಸಗಳು ನಡೆಯಲಿದೆ . ಮಾ.29ರಿಂದ ಎ.6 ರವರೆಗೆ ನಡೆಯುವ ಶ್ರೀ ದೇವರ ಬ್ರಹ್ಮಕಲಶ ಇತ್ಯಾದಿಗಳಿಗೆ ಎಲ್ಲರ ಸಹಕಾರವನ್ನು ಕೋರಿದರು.

Related posts

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!