30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ, ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | ಬಿಎಂ ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡAತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8 ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಿತು.

ಸ್ಥಳೀಯ ಸಂಸ್ಥೆ ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಶಿಬಿರ ಉದ್ಘಾಟಿಸಿ ಶುಭಕೋರಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷ ಪುನೀತ್ ಕುಮಾರ್ ಮಾತನಾಡಿ 250 ಮಂದಿಕ್ಕಿಂತ ಅಧಿಕ ಮಂದಿ ಶಿಬಿರದಲ್ಲಿ ಜನರು ನೋಂದವಾಣಿ ಮಾಡಿಕೊಂಡು ಸದುಪಯೋಗ ಪಡೆದುಕೊಂಡಿದ್ದಾರೆ ಹಾಗೂ ಕಣ್ಣಿನ ದೃಷ್ಟಿ ಸಮಸ್ಯೆವುಳ್ಳವರಿಗೆ ಉಚಿತವಾಗಿ ಕನ್ನಡಕ ನೀಡಲಾಯಿತು ಎಂದರು.

ಮಂಗಳೂರಿನ ಎಜೆ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಸಂಸ್ಕೃತಿ ಶೆಟ್ಟಿ ಹಾಗೂ ಕ್ಯಾನ್ಸರ್ ತಜ್ಞ ಡಾ.ಕಮಲಾಕ್ಷ ಶೆಣೈ ಆರೋಗ್ಯ ಸಂರಕ್ಷಣೆಯ ಮಾಹಿತಿ ನೀಡಿದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಶಿಬಿರದ ಸಹಸಂಚಾಲಕ ಬೆನೆಡಿಕ್ಟ್ ಮಿರಾಂದ, ಸದಸ್ಯರಾದ ಬೇಬಿ ಸುವರ್ಣ, ಸುಧಾಕರ ಆಳ್ವ, ಉಮೇಶ್ , ಪ್ರಮುಖರಾದ ಸಚಿನ್ ಕೋಡ್ಲಕ್ಕೆ, ನಿತ್ಯಾನಂದ ಹೆಗ್ಡೆ ಸುಪದ್ಮ, ಕೇಶವ ಕೆ, ಅಬ್ದುಲ್ ರಹಿಮಾನ್ ಪಡ್ಪು, ಪ್ರೀತಮ್ ದಾಸ್, ಮೋಹನ್ ನಾಯ್ಕ್, ಜಗನ್ನಾಥ ಶೆಟ್ಟಿ, ಯ್ಯೂಟೂಬರ್ ಶ್ಯಾಮ್ ಕಾಮತ್ ಉಜಿರೆ ಸಹಿತ ಮತ್ತಿತರರು ಉಪಸ್ಥಿತರಿದ್ದರು.

ಸಮುದಾಯ ಆರೋಗ್ಯ ಅಧಿಕಾರಿಗಳಿಗೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಘನ ತ್ಯಾಜ್ಯ ಘಟಕದ ಸಿಬ್ಬಂದಿಗಳಿಗೆ, ಪಿಡಿಓ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಪಿಡಿಒ ರಾಜಶೇಖರ್ ರೈ ಸ್ವಾಗತಿಸಿ, ಶಿಕ್ಷಕರಾದ ಸುಕೇಶ್ ಕೆ.ವಂದಿಸಿ, ರಕ್ಷಾ ನಿರೂಪಿಸಿದರು.

ನೇತ್ರ ಶಾಸ್ತ್ರಜ್ಞರು, ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು, ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರು ಶಿಬಿರದಲ್ಲಿದ್ದರು.

Related posts

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!