September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಪ್ರಾಂತೀಯ ಸಮ್ಮೇಳನ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸೇವೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜಗದೀಶ್ ಚಂದ್ರ ಡಿ.ಕೆ. ಅವರು ಹೇಳಿದರು.

ಅವರು ಬೆಳುವಾಯಿ ಖಂಡಿಗ ಗ್ರೀನ್ಸ್ ಆವರಣದಲ್ಲಿ ನಡೆದ ಲಯನ್ಸ್‌ ಕ್ಲಬ್ ಜಿಲ್ಲೆ 317ಡಿ ರೀಜಿಯನ್ 10ರ ಲಯನ್ಸ್ ಪ್ರಾಂತೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮ್ಮೇಳನವನ್ನು ಲಯನ್ಸ್ ಪ್ರಾಂತ್ಯ ಪ್ರಥಮ ಮಹಿಳೆ ಸುಮತಿ ಜೆ. ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಹೆಚ್.ಆರ್. ಕೇಶವ ಮಾತನಾಡಿ, “ಮಾನವೀಯತೆ ಮತ್ತು ಸೇವೆ ಒಗ್ಗೂಡಿದಾಗ ಮೌಲ್ಯಗಳಿಗೆ ಹೆಚ್ಚಿನ ಮಹತ್ವ ಸಿಗುತ್ತದೆ. ಸೇವೆಗೆ ಶಿಕ್ಷಣವೇ ಕಡ್ಡಾಯ ಮಾನದಂಡವಲ್ಲ” ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಮಂಗಳೂರು ಐಎಂಎ ಅಧ್ಯಕ್ಷ ಡಾ. ಸದಾನಂದ ಪೂಜಾರಿ , ಲಯನ್ಸ್‌ ವಲಯ ಅಧ್ಯಕ್ಷ ಕುಡ್ಲಿ ಅರವಿಂದ ಶೆಣೈ ಅಭಿನಂದನಾ ಮಾತುಗಳೊಂದಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಲಯನ್ಸ್‌ ವಲಯ ಅಧ್ಯಕ್ಷರಾದ ಮೆಲ್ವಿನ್ ಸಲ್ವಾನ, ಜೊಸ್ಸಿ ಮಿನೇಜಸ್, ಪ್ರಾಂತೀಯ ಸಮ್ಮೇಳನ ಅಧ್ಯಕ್ಷ ಪ್ರವೀಣ್ ಕುಮಾರ್ ಇಂದ್ರ, ಕಾರ್ಯದರ್ಶಿ ಹೆರಾಲ್ಡ್ ತಾವೋ, ಉಪಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಖಜಾಂಚಿ ಹರೀಶ್ ಪೂಜಾರಿ, ಸಂಚಾಲಕ ಓಸ್ವಾಲ್ಡ್ ಲಯನ್ಸ್ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆ ಪ್ರತಿಭಾ ಹೆಬ್ಬಾರ್, ಸುಧೀರ್ ಭಂಡಾರಿ, ಮುರಳಿ ಬಲಿಪ, ಜಾನೆಟ್ ಡಿ., ಅರುಣ್ ಕಾರ್ಡೋಜ ಹಾಗೂ ಲಿಯೋ ಕ್ಲಬ್‌ ಅಧ್ಯಕ್ಷರುಗಳು, ವೇಣೂರು ಲಯನ್ಸ್ ಕಾರ್ಯದರ್ಶಿ ಜಯರಾಮ್ ಹೆಗ್ಡೆ ಮತ್ತು ಕೋಶಾಧಿಕಾರಿ ಸತೀಶ್ ಚಿಗುರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೃಷಿಕ ವಿ.ಎಸ್. ಜಯರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಲಯನ್ಸ್ ಸೇವಾ ಕಾರ್ಯಗಳನ್ನು ಪ್ರದರ್ಶಿಸಲಾಯಿತು. ಮಂಗಳೂರಿನ ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ನಗರದಲ್ಲಿ ಸರಣಿ ಕಳ್ಳತನ ಪ್ರಕರಣ: ಅಂತರ್ ರಾಜ್ಯ ಕುಖ್ಯಾತ ಕಳ್ಳನ ಸ್ಥಳ ಮಹಜರು

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya
error: Content is protected !!