September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಸ್ವಚ್ಛತಾ ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕವಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

ಅವರು ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಜಿರೆಯಲ್ಲಿ ನಡೆದ 26ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.

ಆದರ್ಶ ಸೇವಾ ಟ್ರಸ್ಟ್ ಹಳೇಪೇಟೆ ಇದರ ಕೋಶಾಧಿಕಾರಿ ರಾಮದಾಸ್ ಭಂಡಾರ್ಕರ್ , ಸಾಮಾಜಿಕ ಮುಖಂಡ ಝಕಾರಿಯಾ ಕುಂಟಿನಿ ಹಾಗೂ ಕರಾಟೆ ತರಬೇತುದಾರ ಅಬ್ದುಲ್ ರಹಿಮಾನ್ ರವರು ಹಸಿರು ನಿಶಾನೆಯನ್ನು ತೋರುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದರು.

ಉಜಿರೆ ಗ್ರಾಮದ ಕುಂಟಿನಿ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮವು ನಡೆಯಿತು.
ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೇಪೇಟೆ ಇದರ ಉಪಾಧ್ಯಕ್ಷ ಹೈದರ್ ಮದನಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇದರ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶರೀಫ್, ಪ್ರಮುಖರಾದ ಹನೀಫ್, ಅಶ್ರಫ್, ಉಬೆದ್ ನಜತ್, ನೃತ್ಯ ತರಬೇತುದಾರ ಉದಯ್ ಎ ಕೆ, ಬ್ಯಾಂಕಿನ ಗ್ರಾಹಕರು, ಸದಸ್ಯರು, ಹಿತೈಷಿಗಳು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!