22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ. 9 ರಿಂದ ಪ್ರಾರಂಭಗೊಂಡು ಫೆ.11 ರವರೆಗೆ ನಡೆಯಲಿದೆ.

ಇಂದು ಕಾಪುವಿನಲ್ಲಿ ಬೆಳಿಗ್ಗೆ ತೋರಣ ಮುಹೂರ್ತ , ಭಂಡಾರ ಹಿಡಿಯುವುದು, ಬ್ರಹ್ಮರು, ಕುಮಾರ ಬೊಳ್ಯಾ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಶಂಕರನಾರಾಯಣ ಭಟ್, ಅಧ್ಯಕ್ಷ ಧರ್ಣಪ್ಪ ಗೌಡ, ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಉಪಾಧ್ಯಕ್ಷ ಐತ್ತಪ್ಪ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಸದಸ್ಯರಾದ ಪಿ. ಪಾಂಡುರಂಗ ಮರಾಠೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಫೆ.10 ರಂದು ಬೆಳಗ್ಗೆ ತೋರಣ ಮುಹೂರ್ತ, ಮಧ್ಯಾಹ್ನ ಗಂಟೆ 2-00ಕ್ಕೆ : ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು. ಸಂಜೆ ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬೆಳಗ್ಗಿನ ತನಕ ಬ್ರಹ್ಮರು, ರುದ್ರಚಾಮುಂಡಿ, ಕಲ್ಲುಡ, ಕಲ್ಲುರ್ಟಿ, ಪಂಜುರ್ಲಿ ಇತ್ಯಾದಿ ದೈವಗಳ “ನೇಮೋತ್ಸವ” ಸಾಯಂಕಾಲ ಗಂಟೆ 6.00ರಿಂದಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ ಗಂಟೆ 7.00ರಿಂದ ಕದಂಬ ತುಳು ನಾಟಕ ನಡೆಯಲಿದೆ.

ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ” ಮಧ್ಯಾಹ್ನ “ಅನ್ನಸಂತರ್ಪಣೆ” ನಡೆಯಲಿದೆ.

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!