September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ. 9 ರಿಂದ ಪ್ರಾರಂಭಗೊಂಡು ಫೆ.11 ರವರೆಗೆ ನಡೆಯಲಿದೆ.

ಇಂದು ಕಾಪುವಿನಲ್ಲಿ ಬೆಳಿಗ್ಗೆ ತೋರಣ ಮುಹೂರ್ತ , ಭಂಡಾರ ಹಿಡಿಯುವುದು, ಬ್ರಹ್ಮರು, ಕುಮಾರ ಬೊಳ್ಯಾ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಶಂಕರನಾರಾಯಣ ಭಟ್, ಅಧ್ಯಕ್ಷ ಧರ್ಣಪ್ಪ ಗೌಡ, ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಉಪಾಧ್ಯಕ್ಷ ಐತ್ತಪ್ಪ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಸದಸ್ಯರಾದ ಪಿ. ಪಾಂಡುರಂಗ ಮರಾಠೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಫೆ.10 ರಂದು ಬೆಳಗ್ಗೆ ತೋರಣ ಮುಹೂರ್ತ, ಮಧ್ಯಾಹ್ನ ಗಂಟೆ 2-00ಕ್ಕೆ : ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು. ಸಂಜೆ ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬೆಳಗ್ಗಿನ ತನಕ ಬ್ರಹ್ಮರು, ರುದ್ರಚಾಮುಂಡಿ, ಕಲ್ಲುಡ, ಕಲ್ಲುರ್ಟಿ, ಪಂಜುರ್ಲಿ ಇತ್ಯಾದಿ ದೈವಗಳ “ನೇಮೋತ್ಸವ” ಸಾಯಂಕಾಲ ಗಂಟೆ 6.00ರಿಂದಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ ಗಂಟೆ 7.00ರಿಂದ ಕದಂಬ ತುಳು ನಾಟಕ ನಡೆಯಲಿದೆ.

ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ” ಮಧ್ಯಾಹ್ನ “ಅನ್ನಸಂತರ್ಪಣೆ” ನಡೆಯಲಿದೆ.

Related posts

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya
error: Content is protected !!