22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಅಪ್ರಾಪ್ತ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಇಂದು(ಫೆ.9) ಬೆಳಿಗ್ಗೆ ಸಂಭವಿಸಿದೆ.

ಸುದೇಮುಗೇರು ವಿದ್ಯಾರ್ಥಿನಿ ಇಂದು ಬೆಳಿಗ್ಗೆ ಸುಮಾರು 8.45 ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಕಾಲೇಜಿಗೆ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಕಾರಿನಲ್ಲಿ ಬಂದ ಮೂರು ಮಂದಿ ಮುಸುಕುಧಾರಿಗಳ ತಂಡ ದ್ವಿಚಕ್ರವಾಹನವನ್ನು ತಡೆಗಟ್ಟಿ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿ ಆಕೆ ವಿರೋಧಿಸಿದಾಗ, ಚೂರಿಯಿಂದ ಹಲ್ಲೆಗೆ ಯತ್ನಿಸಿದರೆನ್ನಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ತಪ್ಪಿಸಿಕೊಂಡಿದ್ದು ವಿದ್ಯಾರ್ಥಿನಿಯ ಕೈಗೆ ಗಾಯವಾಗಿದೆ. ಹಲ್ಲೆ ನಡೆಸಿದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಬಾಲಕಿಯನ್ನು ಬೆಳ್ತಂಗಡಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದು, ಇದರ ಸತ್ಯಾಸತ್ಯತೆ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!