July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 19 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಅಂಗವಾಗಿ ಹೊರಕಾಣಿಕೆ ಹಾಗೂ ಭಜನೋತ್ಸವ ಕಾರ್ಯಕ್ರಮ ನಡೆಯಿತು.

ಹಸಿರುವಾಣಿ ಹೊರಕಾಣಿಕೆಯನ್ನು ಪ್ರಗತಿಪರ ಕೃಷಿಕ ದೇವಿ ಪ್ರಸಾದ್ ಕಡಮ್ಮಾಜೆ ಉದ್ಘಾಟಿಸಿದರು. ಉರುವಾಲು ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭವ್ಯವಾದ ಮೆರವಣಿಗೆಯಲ್ಲಿ ಹೊರಕಾಣಿಕೆಯನ್ನು ತರಲಾಯಿತು.

ಆಹ್ವಾನಿತ ತಂಡದಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸುಧೀರ್ ಕುಮಾರ್ ಹಲೇಜಿ ಕಾರ್ಯಾಧ್ಯಕ್ಷ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಹಲೇಜಿ ಉದ್ಘಾಟಿಸಿ ಮಾತನಾಡಿದರು.

ಈ‌ ಸಂದರ್ಭದಲ್ಲಿ ಶಿಲ್ಪಕಲಾ ಕೇಂದ್ರದ ಅಧ್ಯಕ್ಷ ಪದ್ಮನಾಭ ಶಿಲ್ಪಿ ಪಿಲಿಗೂಡು, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ತರಬೇತುದಾರರಾದ ನಾಗೇಶ್ ನೆರಿಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ವಂದಿಸಿದರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!