37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರುಗಿತು.

ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ ಎಲ್ ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ,ನಿತಿನ್ ,ವಸಂತ, ವಿಜಯ, ಶಿವಣ್ಣ,ಕೇಶವ, ಗಣೇಶ, ಸುಕೇಶ್ ,ಸತೀಶ , ವಿಖ್ಯಾತ , ಜಗದೀಶ , ಪದ್ಮಲತ, ಅರುಣ ಭಾಗವಹಿಸಿ ಯೋಗ ಅಭ್ಯಾಸದಿಂದ ಪಡೆದ ಅನುಭವಗಳನ್ನು ತಿಳಿಸಿದರು.

ಯೋಗ ಕೇಂದ್ರದಲ್ಲಿ ನಿತ್ಯವೂ ಭಾಗವಹಿಸಿ ಶಾಖೆಯನ್ನು ನಿರಂತರವಾಗಿ ನಡೆಯುವಂತೆ ಮುಖ್ಯ ಶಿಕ್ಷಕರು ಮಾರ್ಗದರ್ಶನ ನೀಡಿದರು. ಕಳೆದೊಂದು ವರ್ಷದಲ್ಲಿ ಯೋಗ ಕೇಂದ್ರವನ್ನು ನಡೆಸಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಹಶಿಕ್ಷಕ ಸುಕೇಶ್ ಸ್ವಾಗತಿಸಿ, ಸತೀಶ್ ಭಂಡಾರಿ ನಾಳ ವಂದಿಸಿದರು. ಸಂಚಾಲಕರು ಮತ್ತು ವರದಿ ಪ್ರಮುಖರಾದ ವಿಜಯಣ್ಣ ಮತ್ತು ಕೇಶವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದದಲ್ಲಿ ಅಮೃತ ಫಲಹಾರವನ್ನು ನಡೆಸಲಾಯಿತು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!