22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರುಗಿತು.

ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ ಎಲ್ ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ,ನಿತಿನ್ ,ವಸಂತ, ವಿಜಯ, ಶಿವಣ್ಣ,ಕೇಶವ, ಗಣೇಶ, ಸುಕೇಶ್ ,ಸತೀಶ , ವಿಖ್ಯಾತ , ಜಗದೀಶ , ಪದ್ಮಲತ, ಅರುಣ ಭಾಗವಹಿಸಿ ಯೋಗ ಅಭ್ಯಾಸದಿಂದ ಪಡೆದ ಅನುಭವಗಳನ್ನು ತಿಳಿಸಿದರು.

ಯೋಗ ಕೇಂದ್ರದಲ್ಲಿ ನಿತ್ಯವೂ ಭಾಗವಹಿಸಿ ಶಾಖೆಯನ್ನು ನಿರಂತರವಾಗಿ ನಡೆಯುವಂತೆ ಮುಖ್ಯ ಶಿಕ್ಷಕರು ಮಾರ್ಗದರ್ಶನ ನೀಡಿದರು. ಕಳೆದೊಂದು ವರ್ಷದಲ್ಲಿ ಯೋಗ ಕೇಂದ್ರವನ್ನು ನಡೆಸಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಹಶಿಕ್ಷಕ ಸುಕೇಶ್ ಸ್ವಾಗತಿಸಿ, ಸತೀಶ್ ಭಂಡಾರಿ ನಾಳ ವಂದಿಸಿದರು. ಸಂಚಾಲಕರು ಮತ್ತು ವರದಿ ಪ್ರಮುಖರಾದ ವಿಜಯಣ್ಣ ಮತ್ತು ಕೇಶವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದದಲ್ಲಿ ಅಮೃತ ಫಲಹಾರವನ್ನು ನಡೆಸಲಾಯಿತು.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya
error: Content is protected !!