September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರುಗಿತು.

ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ ಎಲ್ ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ,ನಿತಿನ್ ,ವಸಂತ, ವಿಜಯ, ಶಿವಣ್ಣ,ಕೇಶವ, ಗಣೇಶ, ಸುಕೇಶ್ ,ಸತೀಶ , ವಿಖ್ಯಾತ , ಜಗದೀಶ , ಪದ್ಮಲತ, ಅರುಣ ಭಾಗವಹಿಸಿ ಯೋಗ ಅಭ್ಯಾಸದಿಂದ ಪಡೆದ ಅನುಭವಗಳನ್ನು ತಿಳಿಸಿದರು.

ಯೋಗ ಕೇಂದ್ರದಲ್ಲಿ ನಿತ್ಯವೂ ಭಾಗವಹಿಸಿ ಶಾಖೆಯನ್ನು ನಿರಂತರವಾಗಿ ನಡೆಯುವಂತೆ ಮುಖ್ಯ ಶಿಕ್ಷಕರು ಮಾರ್ಗದರ್ಶನ ನೀಡಿದರು. ಕಳೆದೊಂದು ವರ್ಷದಲ್ಲಿ ಯೋಗ ಕೇಂದ್ರವನ್ನು ನಡೆಸಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಹಶಿಕ್ಷಕ ಸುಕೇಶ್ ಸ್ವಾಗತಿಸಿ, ಸತೀಶ್ ಭಂಡಾರಿ ನಾಳ ವಂದಿಸಿದರು. ಸಂಚಾಲಕರು ಮತ್ತು ವರದಿ ಪ್ರಮುಖರಾದ ವಿಜಯಣ್ಣ ಮತ್ತು ಕೇಶವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದದಲ್ಲಿ ಅಮೃತ ಫಲಹಾರವನ್ನು ನಡೆಸಲಾಯಿತು.

Related posts

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya
error: Content is protected !!