22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ, ಮಹಿಳಾ ಬಿಲ್ಲವ ವೇದಿಕೆ ಸಹಕಾರದಿಂದ, ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ವಾರ್ಷಿಕ ಕ್ರೀಡಾಕೂಟವು ಬಳಂಜ ಸಂಘದ ವಠಾರದಲ್ಲಿ ಫೆ.8ರಂದು ನಡೆಯಿತು.

ಕ್ರೀಡಾಕೂಟವನ್ನು ಗುರುವಾಯನಕೆರೆ ನಿಸರ್ಗ ಕರ್ಟನ್ ಸಂಸ್ಥೆಯ ಮಾಲಕ ನಾಗೇಶ್ ಕೋಟ್ಯಾನ್ ಉದ್ಘಾಟಿಸಿ ಶುಭ ಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದ್ದರು.ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ಚಿದಾನಂದ ಇಡ್ಯ ಸಮವಸ್ತ್ರ ಅನಾವರಣಗೊಳಿಸಿದರು. ಬೆಳ್ತಂಗಡಿ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಬಂಗೇರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಕ್ರೀಡಾಕೂಟದಲ್ಲಿ ಮಹಿಳೆಯರು,ಮಕ್ಕಳು,ಪುರುಷರು ಅತ್ಯಂತ ಖುಷಿಯಿಂದ ಪಾಲ್ಗೊಂಡರು. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ದೆ ಏರ್ಪಡಿಸಲಾಗಿತ್ತು.

ವೇದಿಕೆಯಲ್ಲಿ ಬೆಳ್ತಂಗಡಿ ಮಾತೃಶ್ರೀ‌ ಸಿಲ್ಕ್ ಮತ್ತು ರೆಡಿಮೇಡ್ಸ್ ಮಾಲಕರಾದ ಮೋಹನ್ ಸುವರ್ಣ,ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್ , ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು, ಯುವವಾಹಿನಿ ವೇಣೂರು ಘಟಕಾಧ್ಯಕ್ಷ ಪ್ರಕಾಶ್ ಕೋಟ್ಯಾನ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ಸಾವ್ಯ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್ ಧರ್ಣಪ್ಪ ಪೂಜಾರಿ, ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಕಾರ್ಯದರ್ಶಿ ರಂಜಿತ್ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಕಾರ್ಯದರ್ಶಿ ಸತೀಶ್ ಕೋಟ್ಯಾನ್,ಮಹಿಳಾ ಬಿಲ್ಲವ ವೇದಿಕೆ ಅದ್ಯಕ್ಷೆ ಭಾರತಿ ಸಂತೋಷ್, ಕಾರ್ಯದರ್ಶಿ ಸಂಧ್ಯಾ ಹೆಚ್.ಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಬಳಂಜ, ಭೋಜನದ ವ್ಯವಸ್ಥೆಗೆ ಸಹಕಾರ ನೀಡಿದ ಪುರಂದರ ಪೂಜಾರಿ ಪೆರಾಜೆ ಹಾಗೂ ಬಳಂಜ ಸಂಘದ ಪೂರ್ವಾಧ್ಯಕ್ಷರನ್ನು ಗೌರವಿಸಲಾಯಿತು.

ಮಹಿಳಾ ಬಿಲ್ಲವ ವೇದಿಕೆಯ ಪುಷ್ಪಾಗಿರೀಶ್ ಪ್ರಾರ್ಥನೆಗೈದರು, ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು. ಮಹಿಳಾ ಬಿಲ್ಲವ ವೇದಿಕೆ ಪೂರ್ವಾಧ್ಯಕ್ಷೆ ವಿಶಾಲ ಜಗದೀಶ್ ನಿರೂಪಿಸಿದರು. ಸಂಘದ ನಿರ್ದೇಶಕ ಯತೀಶ್ ವೈ.ಎಲ್ ವಂದಿಸಿದರು. ಸಂಘದ ನಿರ್ದೇಶಕರು, ಸದಸ್ಯರು ಸಹಕರಿಸಿದರು.

Related posts

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!