24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇ ಶ್ವರ ಸ್ವಾಮಿ ದೇವಸ್ಥಾನದ ಈಶ್ವರ ಗರ್ಭ ಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಪ್ರಯುಕ್ತ ಹಳೆ ಗರ್ಭ ಗುಡಿಯ ನೆಲಸಮ ಮಾಡುವ ಕಾಯಕ ಪಂಚಾಂಗ ನಿರ್ಮಾಣ ಅಂಗಣವನ್ನು ಅಗೆದು ಕಾಂಕ್ರೀಟ್ ಹಾಕುವುದು ಹಾಗೂ ಹತ್ತು ಹಲವು ಕೆಲಸಗಳನ್ನು ಗ್ರಾಮದ ಸುಮಾರು 200 ಹಿಂದೂ ಭಾಂದವರು ಒಟ್ಟು ಸೇರಿ ಶ್ರಮದಾನ ಮಾಡಿದರು.

ಈ ವೇಳೆ ಶ್ರಮದಾನದಿಂದ ದೇವಾಲಯಕ್ಕೆ ಅಂದಾಜು ಸುಮಾರು 4 ಲಕ್ಷಗಳಷ್ಟು ಉಳಿತಾಯವಾಗಿರುತ್ತದೆ ಎಂದು ಅನುವಂಶಿಯ ಆಡಳಿತ ಮೊಕ್ತೇಸರರು ತಿಳಿಸಿದ್ದು ಈ ರೀತಿಯ ಸಹಕಾರ ಊರಿನ ಭಕ್ತಾದಿಗಳಿಂದ ದೊರಕಿದರೆ ದೇವಾಲಯಗಳ ಅಭಿವೃದ್ಧಿಗೆ ಮುನ್ನುಗಲು ಆಡಳಿತದವರಿಗೆ ಧೈರ್ಯ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಸೇರಿದ ಎಲ್ಲಾ ಕರಸೇವಕರನ್ನು ಅಭಿನಂದಿಸಿ ಮುಂದಿನ ದಿನಗಳಲ್ಲಿ ಸ್ವಚ್ಛತೆ ಚಪ್ಪರ ಹಾಕುವುದು ಇತ್ಯಾದಿ ಬ್ರಹ್ಮ ಕಲಶದ ಪೂರ್ವ ಭಾವಿ ಕೆಲಸಗಳು ನಡೆಯಲಿದೆ . ಮಾ.29ರಿಂದ ಎ.6 ರವರೆಗೆ ನಡೆಯುವ ಶ್ರೀ ದೇವರ ಬ್ರಹ್ಮಕಲಶ ಇತ್ಯಾದಿಗಳಿಗೆ ಎಲ್ಲರ ಸಹಕಾರವನ್ನು ಕೋರಿದರು.

Related posts

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya
error: Content is protected !!