23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ, ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | ಬಿಎಂ ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡAತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8 ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಿತು.

ಸ್ಥಳೀಯ ಸಂಸ್ಥೆ ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಶಿಬಿರ ಉದ್ಘಾಟಿಸಿ ಶುಭಕೋರಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷ ಪುನೀತ್ ಕುಮಾರ್ ಮಾತನಾಡಿ 250 ಮಂದಿಕ್ಕಿಂತ ಅಧಿಕ ಮಂದಿ ಶಿಬಿರದಲ್ಲಿ ಜನರು ನೋಂದವಾಣಿ ಮಾಡಿಕೊಂಡು ಸದುಪಯೋಗ ಪಡೆದುಕೊಂಡಿದ್ದಾರೆ ಹಾಗೂ ಕಣ್ಣಿನ ದೃಷ್ಟಿ ಸಮಸ್ಯೆವುಳ್ಳವರಿಗೆ ಉಚಿತವಾಗಿ ಕನ್ನಡಕ ನೀಡಲಾಯಿತು ಎಂದರು.

ಮಂಗಳೂರಿನ ಎಜೆ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಸಂಸ್ಕೃತಿ ಶೆಟ್ಟಿ ಹಾಗೂ ಕ್ಯಾನ್ಸರ್ ತಜ್ಞ ಡಾ.ಕಮಲಾಕ್ಷ ಶೆಣೈ ಆರೋಗ್ಯ ಸಂರಕ್ಷಣೆಯ ಮಾಹಿತಿ ನೀಡಿದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಶಿಬಿರದ ಸಹಸಂಚಾಲಕ ಬೆನೆಡಿಕ್ಟ್ ಮಿರಾಂದ, ಸದಸ್ಯರಾದ ಬೇಬಿ ಸುವರ್ಣ, ಸುಧಾಕರ ಆಳ್ವ, ಉಮೇಶ್ , ಪ್ರಮುಖರಾದ ಸಚಿನ್ ಕೋಡ್ಲಕ್ಕೆ, ನಿತ್ಯಾನಂದ ಹೆಗ್ಡೆ ಸುಪದ್ಮ, ಕೇಶವ ಕೆ, ಅಬ್ದುಲ್ ರಹಿಮಾನ್ ಪಡ್ಪು, ಪ್ರೀತಮ್ ದಾಸ್, ಮೋಹನ್ ನಾಯ್ಕ್, ಜಗನ್ನಾಥ ಶೆಟ್ಟಿ, ಯ್ಯೂಟೂಬರ್ ಶ್ಯಾಮ್ ಕಾಮತ್ ಉಜಿರೆ ಸಹಿತ ಮತ್ತಿತರರು ಉಪಸ್ಥಿತರಿದ್ದರು.

ಸಮುದಾಯ ಆರೋಗ್ಯ ಅಧಿಕಾರಿಗಳಿಗೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಘನ ತ್ಯಾಜ್ಯ ಘಟಕದ ಸಿಬ್ಬಂದಿಗಳಿಗೆ, ಪಿಡಿಓ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಪಿಡಿಒ ರಾಜಶೇಖರ್ ರೈ ಸ್ವಾಗತಿಸಿ, ಶಿಕ್ಷಕರಾದ ಸುಕೇಶ್ ಕೆ.ವಂದಿಸಿ, ರಕ್ಷಾ ನಿರೂಪಿಸಿದರು.

ನೇತ್ರ ಶಾಸ್ತ್ರಜ್ಞರು, ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು, ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರು ಶಿಬಿರದಲ್ಲಿದ್ದರು.

Related posts

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya
error: Content is protected !!