22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

ಬೆಳ್ತಂಗಡಿ: ಕೃಷಿಗಾಗಿ ಜೀವನ ಸವೆಸಿದ ರೈತರಿಗೆ ಗೌರವ ಸಲ್ಲಿಸಬೇಕು ಎಂದು ರೈತ ಉದ್ಯಮಿ, ಎಸ್‌ಕೆಎಫ್‌ ಎಲಿಕ್ಸರ್‌ ಸಂಸ್ಥೆಯ ಮುಖ್ಯಸ್ಥರಾದ ಡಾ.ರಾಮಕೃಷ್ಣ ಆಚಾರ್ ಅವರು ರೈತಪೀಠ ಪ್ರಶಸ್ತಿ ಸ್ಥಾಪಿಸಿದ್ದು, ಮೊದಲ ರೈತಪೀಠ ಪ್ರಶಸ್ತಿಯನ್ನು 200ಕ್ಕೂ ಹೆಚ್ಚು ಅಪರೂಪದ ಭತ್ತದ ತಳಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಿರುವ ಅಪರೂಪದ ತಳಿ ಸಂರಕ್ಷಕ ಬೆಳ್ತಂಗಡಿ ತಾಲೂಕಿನ ಬಿ.ಕೆ. ದೇವರಾಯ ಮಿತ್ತಬಾಗಿಲು ಅವರಿಗೆ ನೀಡಲಾಗುತ್ತಿದೆ.

ಫೆ.20ರಂದು ಕಾರ್ಕಳ ತಾಲೂಕು ಮುನಿಯಾಲಿನಲ್ಲಿರುವ ಗೋ-ಧಾಮ ತೋಟದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಪ್ರಶಸ್ತಿ ನೀಡುತ್ತಿರುವ ಡಾ.ರಾಮಕೃಷ್ಣ ಆಚಾರ್ ಅವರು ಬಿ.ಕೆ. ದೇವರಾಯ ಮಿತ್ತಬಾಗಿಲು ಮತ್ತು ಅವರ ಕುಟುಂಬವನ್ನು ಅಧಿಕೃತವಾಗಿ ಆಹ್ವಾನಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ರಾಮಕೃಷ್ಣ ಅಚಾರ್ ಅವರು, ‘ಕೃಷಿಯ ಮಹತ್ವ ಇಂದಿನ ಪೀಳಿಗೆಗೆ ತಿಳಿಯದಾಗುತ್ತಿದೆ. ಸಂದರ್ಭ ಹೀಗಿರುವಾಗ ಬಿ.ಕೆ. ದೇವರಾಯರು ಕಳೆದ ಆರು ದಶಕಗಳಿಂದ ಭತ್ತದ ತಳಿಗಳನ್ನು ಉಳಿಸಿ ರಕ್ಷಿಸುತ್ತಾ ನಮ್ಮ ಮಾನವ ಕುಲಕ್ಕೆ, ಭೂಮಿಗೆ ಸಹಾಯ ಮಾಡಿದ್ದಾರೆ. ಅವರ ಈ ಕೊಡುಗೆ ಬೆಲೆಕಟ್ಟಲಾರದು. ಅಂಥಾ ಹಿರಿಯರಿಗೆ ಗೌರವ ಸಲ್ಲಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆ ತಂದಿದೆ’ ಎಂದು ಹೇಳಿದರು.

ಕಾಲದ ಹೊಡೆತಕ್ಕೆ ಮರೆಯಾಗಿ ಹೋಗಬಹುದಾಗಿದ್ದ ಅಪರೂಪದ ತಳಿಗಳನ್ನು ಮುಂದಿನ ಪೀಳಿಗೆಗೆ ಉಳಿಸಿರುವುದಲ್ಲದೇ, ಕೃಷಿಯಲ್ಲಿ ಇತರರಿಗೂ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ. ದೇವರಾಯರಿಗೆ ಮತ್ತು ಅವರ ಶ್ರೇಷ್ಠ ಬದುಕಿಗೆ ಗೌರವ ನೀಡುವ ಸಲುವಾಗಿ ಮೊದಲ ವರ್ಷದ ರೈತಪೀಠ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡುತ್ತಿದ್ದೇವೆ’ ಎಂದು ಡಾ. ರಾಮಕೃಷ್ಣ ಆಚಾರ್ ತಿಳಿಸಿದ್ದಾರೆ.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya
error: Content is protected !!