25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

ಪುದುವೆಟ್ಟು: ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನ ಮಿಯ್ಯಾರು ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುದುವೆಟ್ಟು ವಿಭಾಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಫೆ.7 ಹಾಗೂ 8ರಂದು ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ರಂಗಪೂಜೆ ಜರುಗಿತು.

ಫೆ. 8ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೊಮ್ಮಣ್ಣ ಗೌಡ ಮಠ ವಹಿಸಿದ್ದರು. ಧಾರ್ಮಿಕ ಪ್ರವಚನವನ್ನು ಲಕ್ಷ್ಮೀಶ ಭಟ್ ಗಬಲಡ್ಕ ನೀಡಿದರು. ಮುಖ್ಯ ಅತಿಥಿಗಳಾಗಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಬೆಳ್ತಂಗಡಿ ಸೇವಾ ಭಾರತಿ ಅಧ್ಯಕ್ಷೆ ಸ್ವರ್ಣ ಗೌರಿ, ಲಾಯಿಲ ಸ್ವಾಮಿ ಪ್ರಸಾದ್ ಕನ್‌ಸ್ಟ್ರಕ್ಷನ್ಸ್ ನ ನಾಗೇಶ್ ಕುಮಾರ್ ಗೌಡ, ಮಿಯ್ಯಾರು ವನದುರ್ಗಾ ದೇವಸ್ಥಾನದ ಗೌರವಾಧ್ಯಕ್ಷ ರಮೇಶ್ ಪ್ರಭು, ರಮೇಶ್ ರಾವ್ ಮಾಂಜೀಲು, ಡೆವಲಪ್ ಮೆಂಟ್ ಟ್ರಸ್ಟ್ ಅಧ್ಯಕ್ಷ ಶ್ರೀಪತಿ ಹೆಬ್ಬಾರ್, ಗ್ರಾ. ಪಂ. ಅಧ್ಯಕ್ಷ ಪೂರ್ಣಕ್ಷಾ, ಜಿ. ಪಂ. ಮಾಜಿ ಸದಸ್ಯೆ ನಮಿತಾ ಪೂಜಾರಿ ಆಗಮಿಸಿದ್ದರು.

ವೇದಿಕೆಯಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಮೋಹಿನಿ ಧರ್ಮರಾಜ್, ಪೂಜಾ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ವಾಣಿ ಪ. ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ ಡೆಚ್ಚಾರು ದಂಪತಿಗಳನ್ನು, ಸಿಟಿಡಿ ಮಣ್ಣಗುಂಡಿ ಉಪ ವಲಯಾರಣ್ಯಾಧಿಕಾರಿ ಎಂ. ಯತಿಂದ್ರ ದಂಪತಿಗಳನ್ನು ಸನ್ಮಾನಿಸಲಾಯಿತು.


ವೇದಿಕಾ ಮತ್ತು ತಂಡದವರು ಪ್ರಾರ್ಥಿಸಿದರು. ಶಿಕ್ಷಕ ಸುರೇಶ್ ಕೆ. ಆರ್. ಸ್ವಾಗತಿಸಿದರು. ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಸಂತೋಷ್ ಕೆ. ಸಿ. ವರದಿ ವಾಚಿಸಿದರು. ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ನಿಶಾಂತ್ ಧನ್ಯವಾದವಿತ್ತರು.

ಫೆ.7ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಮಹಾಮಂಗಳಾರತಿ, ಮಧ್ಯಾಹ್ನ ಶ್ರೀ ವನದುರ್ಗಾ ದೇವಿಯ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಹಿಪ್-ಬಾಯ್ಸ್ ನೃತ್ಯ ತಂಡ ಉಜಿರೆ ಇವರಿಂದ ನೃತ್ಯ ಕಾರ್ಯಕ್ರಮ, ಅಪ್ಪೆ ಬ್ರಾಹ್ಮರಿ, ರಾತ್ರಿ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಫೆ.8ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಪುದುವೆಟ್ಟು ಗ್ರಾಮದ ಪ್ರತಿಭಾನ್ವಿತರಿಂದ ಸಾಂಸ್ಕೃತಿಕ ವೈವಿಧ್ಯ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಭಜನಾ ಕಮ್ಮಟೋತ್ಸವ ಜರುಗಿತು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!