25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಪ್ರಾಂತೀಯ ಸಮ್ಮೇಳನ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸೇವೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜಗದೀಶ್ ಚಂದ್ರ ಡಿ.ಕೆ. ಅವರು ಹೇಳಿದರು.

ಅವರು ಬೆಳುವಾಯಿ ಖಂಡಿಗ ಗ್ರೀನ್ಸ್ ಆವರಣದಲ್ಲಿ ನಡೆದ ಲಯನ್ಸ್‌ ಕ್ಲಬ್ ಜಿಲ್ಲೆ 317ಡಿ ರೀಜಿಯನ್ 10ರ ಲಯನ್ಸ್ ಪ್ರಾಂತೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮ್ಮೇಳನವನ್ನು ಲಯನ್ಸ್ ಪ್ರಾಂತ್ಯ ಪ್ರಥಮ ಮಹಿಳೆ ಸುಮತಿ ಜೆ. ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಹೆಚ್.ಆರ್. ಕೇಶವ ಮಾತನಾಡಿ, “ಮಾನವೀಯತೆ ಮತ್ತು ಸೇವೆ ಒಗ್ಗೂಡಿದಾಗ ಮೌಲ್ಯಗಳಿಗೆ ಹೆಚ್ಚಿನ ಮಹತ್ವ ಸಿಗುತ್ತದೆ. ಸೇವೆಗೆ ಶಿಕ್ಷಣವೇ ಕಡ್ಡಾಯ ಮಾನದಂಡವಲ್ಲ” ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಮಂಗಳೂರು ಐಎಂಎ ಅಧ್ಯಕ್ಷ ಡಾ. ಸದಾನಂದ ಪೂಜಾರಿ , ಲಯನ್ಸ್‌ ವಲಯ ಅಧ್ಯಕ್ಷ ಕುಡ್ಲಿ ಅರವಿಂದ ಶೆಣೈ ಅಭಿನಂದನಾ ಮಾತುಗಳೊಂದಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಲಯನ್ಸ್‌ ವಲಯ ಅಧ್ಯಕ್ಷರಾದ ಮೆಲ್ವಿನ್ ಸಲ್ವಾನ, ಜೊಸ್ಸಿ ಮಿನೇಜಸ್, ಪ್ರಾಂತೀಯ ಸಮ್ಮೇಳನ ಅಧ್ಯಕ್ಷ ಪ್ರವೀಣ್ ಕುಮಾರ್ ಇಂದ್ರ, ಕಾರ್ಯದರ್ಶಿ ಹೆರಾಲ್ಡ್ ತಾವೋ, ಉಪಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಖಜಾಂಚಿ ಹರೀಶ್ ಪೂಜಾರಿ, ಸಂಚಾಲಕ ಓಸ್ವಾಲ್ಡ್ ಲಯನ್ಸ್ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆ ಪ್ರತಿಭಾ ಹೆಬ್ಬಾರ್, ಸುಧೀರ್ ಭಂಡಾರಿ, ಮುರಳಿ ಬಲಿಪ, ಜಾನೆಟ್ ಡಿ., ಅರುಣ್ ಕಾರ್ಡೋಜ ಹಾಗೂ ಲಿಯೋ ಕ್ಲಬ್‌ ಅಧ್ಯಕ್ಷರುಗಳು, ವೇಣೂರು ಲಯನ್ಸ್ ಕಾರ್ಯದರ್ಶಿ ಜಯರಾಮ್ ಹೆಗ್ಡೆ ಮತ್ತು ಕೋಶಾಧಿಕಾರಿ ಸತೀಶ್ ಚಿಗುರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೃಷಿಕ ವಿ.ಎಸ್. ಜಯರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಲಯನ್ಸ್ ಸೇವಾ ಕಾರ್ಯಗಳನ್ನು ಪ್ರದರ್ಶಿಸಲಾಯಿತು. ಮಂಗಳೂರಿನ ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya
error: Content is protected !!