March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಸ್ವಚ್ಛತಾ ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕವಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

ಅವರು ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಜಿರೆಯಲ್ಲಿ ನಡೆದ 26ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.

ಆದರ್ಶ ಸೇವಾ ಟ್ರಸ್ಟ್ ಹಳೇಪೇಟೆ ಇದರ ಕೋಶಾಧಿಕಾರಿ ರಾಮದಾಸ್ ಭಂಡಾರ್ಕರ್ , ಸಾಮಾಜಿಕ ಮುಖಂಡ ಝಕಾರಿಯಾ ಕುಂಟಿನಿ ಹಾಗೂ ಕರಾಟೆ ತರಬೇತುದಾರ ಅಬ್ದುಲ್ ರಹಿಮಾನ್ ರವರು ಹಸಿರು ನಿಶಾನೆಯನ್ನು ತೋರುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದರು.

ಉಜಿರೆ ಗ್ರಾಮದ ಕುಂಟಿನಿ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮವು ನಡೆಯಿತು.
ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೇಪೇಟೆ ಇದರ ಉಪಾಧ್ಯಕ್ಷ ಹೈದರ್ ಮದನಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇದರ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶರೀಫ್, ಪ್ರಮುಖರಾದ ಹನೀಫ್, ಅಶ್ರಫ್, ಉಬೆದ್ ನಜತ್, ನೃತ್ಯ ತರಬೇತುದಾರ ಉದಯ್ ಎ ಕೆ, ಬ್ಯಾಂಕಿನ ಗ್ರಾಹಕರು, ಸದಸ್ಯರು, ಹಿತೈಷಿಗಳು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya
error: Content is protected !!