32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ. 9 ರಿಂದ ಪ್ರಾರಂಭಗೊಂಡು ಫೆ.11 ರವರೆಗೆ ನಡೆಯಲಿದೆ.

ಇಂದು ಕಾಪುವಿನಲ್ಲಿ ಬೆಳಿಗ್ಗೆ ತೋರಣ ಮುಹೂರ್ತ , ಭಂಡಾರ ಹಿಡಿಯುವುದು, ಬ್ರಹ್ಮರು, ಕುಮಾರ ಬೊಳ್ಯಾ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಶಂಕರನಾರಾಯಣ ಭಟ್, ಅಧ್ಯಕ್ಷ ಧರ್ಣಪ್ಪ ಗೌಡ, ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಉಪಾಧ್ಯಕ್ಷ ಐತ್ತಪ್ಪ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಸದಸ್ಯರಾದ ಪಿ. ಪಾಂಡುರಂಗ ಮರಾಠೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಫೆ.10 ರಂದು ಬೆಳಗ್ಗೆ ತೋರಣ ಮುಹೂರ್ತ, ಮಧ್ಯಾಹ್ನ ಗಂಟೆ 2-00ಕ್ಕೆ : ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು. ಸಂಜೆ ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬೆಳಗ್ಗಿನ ತನಕ ಬ್ರಹ್ಮರು, ರುದ್ರಚಾಮುಂಡಿ, ಕಲ್ಲುಡ, ಕಲ್ಲುರ್ಟಿ, ಪಂಜುರ್ಲಿ ಇತ್ಯಾದಿ ದೈವಗಳ “ನೇಮೋತ್ಸವ” ಸಾಯಂಕಾಲ ಗಂಟೆ 6.00ರಿಂದಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ ಗಂಟೆ 7.00ರಿಂದ ಕದಂಬ ತುಳು ನಾಟಕ ನಡೆಯಲಿದೆ.

ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ” ಮಧ್ಯಾಹ್ನ “ಅನ್ನಸಂತರ್ಪಣೆ” ನಡೆಯಲಿದೆ.

Related posts

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya
error: Content is protected !!