September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ. 9 ರಿಂದ ಪ್ರಾರಂಭಗೊಂಡು ಫೆ.11 ರವರೆಗೆ ನಡೆಯಲಿದೆ.

ಇಂದು ಕಾಪುವಿನಲ್ಲಿ ಬೆಳಿಗ್ಗೆ ತೋರಣ ಮುಹೂರ್ತ , ಭಂಡಾರ ಹಿಡಿಯುವುದು, ಬ್ರಹ್ಮರು, ಕುಮಾರ ಬೊಳ್ಯಾ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಶಂಕರನಾರಾಯಣ ಭಟ್, ಅಧ್ಯಕ್ಷ ಧರ್ಣಪ್ಪ ಗೌಡ, ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಉಪಾಧ್ಯಕ್ಷ ಐತ್ತಪ್ಪ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಸದಸ್ಯರಾದ ಪಿ. ಪಾಂಡುರಂಗ ಮರಾಠೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಫೆ.10 ರಂದು ಬೆಳಗ್ಗೆ ತೋರಣ ಮುಹೂರ್ತ, ಮಧ್ಯಾಹ್ನ ಗಂಟೆ 2-00ಕ್ಕೆ : ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು. ಸಂಜೆ ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬೆಳಗ್ಗಿನ ತನಕ ಬ್ರಹ್ಮರು, ರುದ್ರಚಾಮುಂಡಿ, ಕಲ್ಲುಡ, ಕಲ್ಲುರ್ಟಿ, ಪಂಜುರ್ಲಿ ಇತ್ಯಾದಿ ದೈವಗಳ “ನೇಮೋತ್ಸವ” ಸಾಯಂಕಾಲ ಗಂಟೆ 6.00ರಿಂದಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ ಗಂಟೆ 7.00ರಿಂದ ಕದಂಬ ತುಳು ನಾಟಕ ನಡೆಯಲಿದೆ.

ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ” ಮಧ್ಯಾಹ್ನ “ಅನ್ನಸಂತರ್ಪಣೆ” ನಡೆಯಲಿದೆ.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!