September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 19 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಅಂಗವಾಗಿ ಹೊರಕಾಣಿಕೆ ಹಾಗೂ ಭಜನೋತ್ಸವ ಕಾರ್ಯಕ್ರಮ ನಡೆಯಿತು.

ಹಸಿರುವಾಣಿ ಹೊರಕಾಣಿಕೆಯನ್ನು ಪ್ರಗತಿಪರ ಕೃಷಿಕ ದೇವಿ ಪ್ರಸಾದ್ ಕಡಮ್ಮಾಜೆ ಉದ್ಘಾಟಿಸಿದರು. ಉರುವಾಲು ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭವ್ಯವಾದ ಮೆರವಣಿಗೆಯಲ್ಲಿ ಹೊರಕಾಣಿಕೆಯನ್ನು ತರಲಾಯಿತು.

ಆಹ್ವಾನಿತ ತಂಡದಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸುಧೀರ್ ಕುಮಾರ್ ಹಲೇಜಿ ಕಾರ್ಯಾಧ್ಯಕ್ಷ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಹಲೇಜಿ ಉದ್ಘಾಟಿಸಿ ಮಾತನಾಡಿದರು.

ಈ‌ ಸಂದರ್ಭದಲ್ಲಿ ಶಿಲ್ಪಕಲಾ ಕೇಂದ್ರದ ಅಧ್ಯಕ್ಷ ಪದ್ಮನಾಭ ಶಿಲ್ಪಿ ಪಿಲಿಗೂಡು, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ತರಬೇತುದಾರರಾದ ನಾಗೇಶ್ ನೆರಿಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ವಂದಿಸಿದರು.

Related posts

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!