25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 19 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಅಂಗವಾಗಿ ಹೊರಕಾಣಿಕೆ ಹಾಗೂ ಭಜನೋತ್ಸವ ಕಾರ್ಯಕ್ರಮ ನಡೆಯಿತು.

ಹಸಿರುವಾಣಿ ಹೊರಕಾಣಿಕೆಯನ್ನು ಪ್ರಗತಿಪರ ಕೃಷಿಕ ದೇವಿ ಪ್ರಸಾದ್ ಕಡಮ್ಮಾಜೆ ಉದ್ಘಾಟಿಸಿದರು. ಉರುವಾಲು ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭವ್ಯವಾದ ಮೆರವಣಿಗೆಯಲ್ಲಿ ಹೊರಕಾಣಿಕೆಯನ್ನು ತರಲಾಯಿತು.

ಆಹ್ವಾನಿತ ತಂಡದಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸುಧೀರ್ ಕುಮಾರ್ ಹಲೇಜಿ ಕಾರ್ಯಾಧ್ಯಕ್ಷ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಹಲೇಜಿ ಉದ್ಘಾಟಿಸಿ ಮಾತನಾಡಿದರು.

ಈ‌ ಸಂದರ್ಭದಲ್ಲಿ ಶಿಲ್ಪಕಲಾ ಕೇಂದ್ರದ ಅಧ್ಯಕ್ಷ ಪದ್ಮನಾಭ ಶಿಲ್ಪಿ ಪಿಲಿಗೂಡು, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ತರಬೇತುದಾರರಾದ ನಾಗೇಶ್ ನೆರಿಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ವಂದಿಸಿದರು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!