23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರುಗಿತು.

ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ ಎಲ್ ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ,ನಿತಿನ್ ,ವಸಂತ, ವಿಜಯ, ಶಿವಣ್ಣ,ಕೇಶವ, ಗಣೇಶ, ಸುಕೇಶ್ ,ಸತೀಶ , ವಿಖ್ಯಾತ , ಜಗದೀಶ , ಪದ್ಮಲತ, ಅರುಣ ಭಾಗವಹಿಸಿ ಯೋಗ ಅಭ್ಯಾಸದಿಂದ ಪಡೆದ ಅನುಭವಗಳನ್ನು ತಿಳಿಸಿದರು.

ಯೋಗ ಕೇಂದ್ರದಲ್ಲಿ ನಿತ್ಯವೂ ಭಾಗವಹಿಸಿ ಶಾಖೆಯನ್ನು ನಿರಂತರವಾಗಿ ನಡೆಯುವಂತೆ ಮುಖ್ಯ ಶಿಕ್ಷಕರು ಮಾರ್ಗದರ್ಶನ ನೀಡಿದರು. ಕಳೆದೊಂದು ವರ್ಷದಲ್ಲಿ ಯೋಗ ಕೇಂದ್ರವನ್ನು ನಡೆಸಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಹಶಿಕ್ಷಕ ಸುಕೇಶ್ ಸ್ವಾಗತಿಸಿ, ಸತೀಶ್ ಭಂಡಾರಿ ನಾಳ ವಂದಿಸಿದರು. ಸಂಚಾಲಕರು ಮತ್ತು ವರದಿ ಪ್ರಮುಖರಾದ ವಿಜಯಣ್ಣ ಮತ್ತು ಕೇಶವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದದಲ್ಲಿ ಅಮೃತ ಫಲಹಾರವನ್ನು ನಡೆಸಲಾಯಿತು.

Related posts

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya
error: Content is protected !!