July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರುಗಿತು.

ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ ಎಲ್ ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ,ನಿತಿನ್ ,ವಸಂತ, ವಿಜಯ, ಶಿವಣ್ಣ,ಕೇಶವ, ಗಣೇಶ, ಸುಕೇಶ್ ,ಸತೀಶ , ವಿಖ್ಯಾತ , ಜಗದೀಶ , ಪದ್ಮಲತ, ಅರುಣ ಭಾಗವಹಿಸಿ ಯೋಗ ಅಭ್ಯಾಸದಿಂದ ಪಡೆದ ಅನುಭವಗಳನ್ನು ತಿಳಿಸಿದರು.

ಯೋಗ ಕೇಂದ್ರದಲ್ಲಿ ನಿತ್ಯವೂ ಭಾಗವಹಿಸಿ ಶಾಖೆಯನ್ನು ನಿರಂತರವಾಗಿ ನಡೆಯುವಂತೆ ಮುಖ್ಯ ಶಿಕ್ಷಕರು ಮಾರ್ಗದರ್ಶನ ನೀಡಿದರು. ಕಳೆದೊಂದು ವರ್ಷದಲ್ಲಿ ಯೋಗ ಕೇಂದ್ರವನ್ನು ನಡೆಸಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಹಶಿಕ್ಷಕ ಸುಕೇಶ್ ಸ್ವಾಗತಿಸಿ, ಸತೀಶ್ ಭಂಡಾರಿ ನಾಳ ವಂದಿಸಿದರು. ಸಂಚಾಲಕರು ಮತ್ತು ವರದಿ ಪ್ರಮುಖರಾದ ವಿಜಯಣ್ಣ ಮತ್ತು ಕೇಶವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದದಲ್ಲಿ ಅಮೃತ ಫಲಹಾರವನ್ನು ನಡೆಸಲಾಯಿತು.

Related posts

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya
error: Content is protected !!